ಮೈಸೂರು

ದೇಶವಿದೇಶಗಳಲ್ಲೂ ಅನುರಣಿಸಿದ ಕನ್ನಡದ ಕಂಪು

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಆಯೋಜಿಸಿದ್ದ ‘ಕೋಟಿ ಕಂಠ ಗಾಯನ’ ವಿಶ್ವದೆಲ್ಲೆಡೆ ಅನುರಣಿಸಿದೆ.

ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಡು, ನಾಡು, ನುಡಿ ಸಂರಕ್ಷಣಾ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಕನ್ನಡದ ಆಯ್ದ ಗೀತೆಗಳಿಗೆ ಧ್ವನಿಗೂಡಿಸಿದರು.

ಸರಕಾರ ಈ ಹಿಂದೆಯೇ ನೀಡಿರುವ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಸೇರಿದಂತೆ ಒಟ್ಟು ಆರು ಹಾಡುಗಳನ್ನು ನಾಡಿನಾದ್ಯಂತ ಗಾಯಕರು ಹಾಡಿದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕಂದಾಯ ಸಚಿವ ಅಶೋಕ್ ,ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಭಾಗವಹಿಸಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ.1ರಂದು 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು. ಅಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಂಬಾವಿಲಾಸ ಅರಮನೆ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರದ ನಾನಾ ಭಾಗಗಳಿಂದ ಆಗಮಿಸಿದ್ದ ನಾನಾ ಕನ್ನಡ ಸಂಘಟನೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಪೂರ್ಣಿಮಾ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹೇಮಂತ್ ಕುಮಾರ್, ಸಂಗೀತ ವಿವಿ ಕುಲಪತಿ ರವಿಕುಮಾರ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.

ಧಾರವಾಡದ ಕಿಮ್ಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು, ಕನ್ನಡದ ಆಯ್ದ ಗೀತೆಗಳನ್ನು ಹಾಡಲಾಯಿತು.

ಪುನೀತ್ ಗೆ ಪ್ರಶಸ್ತಿ: ರಜನಿಕಾಂತ್, ಜೂ.ಎನ್ಟಿಆರ್ ಗೆ ಆಹ್ವಾನ
ಮೈಸೂರು: ನ.1ರಂದು 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಿದ್ಧತೆ ನಡೆದಿದೆ.

ಪುನೀತ್ ರಾಜ್ ಕುಮಾರ್ ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನವಾಗಿದ್ದಾರೆ. ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್ಟಿಆರ್ಗೆ ಆಹ್ವಾನ ನೀಡಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್ ಕುಮಾರ್ ಕುಟುಂಬದವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

5 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

9 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

10 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago