ಮೈಸೂರು

ದೇಶವಿದೇಶಗಳಲ್ಲೂ ಅನುರಣಿಸಿದ ಕನ್ನಡದ ಕಂಪು

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಆಯೋಜಿಸಿದ್ದ ‘ಕೋಟಿ ಕಂಠ ಗಾಯನ’ ವಿಶ್ವದೆಲ್ಲೆಡೆ ಅನುರಣಿಸಿದೆ.

ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಡು, ನಾಡು, ನುಡಿ ಸಂರಕ್ಷಣಾ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಕನ್ನಡದ ಆಯ್ದ ಗೀತೆಗಳಿಗೆ ಧ್ವನಿಗೂಡಿಸಿದರು.

ಸರಕಾರ ಈ ಹಿಂದೆಯೇ ನೀಡಿರುವ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಸೇರಿದಂತೆ ಒಟ್ಟು ಆರು ಹಾಡುಗಳನ್ನು ನಾಡಿನಾದ್ಯಂತ ಗಾಯಕರು ಹಾಡಿದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕಂದಾಯ ಸಚಿವ ಅಶೋಕ್ ,ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಭಾಗವಹಿಸಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ.1ರಂದು 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು. ಅಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಂಬಾವಿಲಾಸ ಅರಮನೆ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರದ ನಾನಾ ಭಾಗಗಳಿಂದ ಆಗಮಿಸಿದ್ದ ನಾನಾ ಕನ್ನಡ ಸಂಘಟನೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಪೂರ್ಣಿಮಾ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹೇಮಂತ್ ಕುಮಾರ್, ಸಂಗೀತ ವಿವಿ ಕುಲಪತಿ ರವಿಕುಮಾರ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.

ಧಾರವಾಡದ ಕಿಮ್ಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು, ಕನ್ನಡದ ಆಯ್ದ ಗೀತೆಗಳನ್ನು ಹಾಡಲಾಯಿತು.

ಪುನೀತ್ ಗೆ ಪ್ರಶಸ್ತಿ: ರಜನಿಕಾಂತ್, ಜೂ.ಎನ್ಟಿಆರ್ ಗೆ ಆಹ್ವಾನ
ಮೈಸೂರು: ನ.1ರಂದು 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಿದ್ಧತೆ ನಡೆದಿದೆ.

ಪುನೀತ್ ರಾಜ್ ಕುಮಾರ್ ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನವಾಗಿದ್ದಾರೆ. ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್ಟಿಆರ್ಗೆ ಆಹ್ವಾನ ನೀಡಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್ ಕುಮಾರ್ ಕುಟುಂಬದವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago