ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು.
ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಂಸಾಳೆ ಮಹಾದೇವಯ್ಯನವರ ಸುಪುತ್ರರಾದ ಕುಮಾರಸ್ವಾಮಿ ಅವರು 1951ರಲ್ಲಿ ಮೈಸೂರಿನ ಬಂಡಿಕೇರಿಯಲ್ಲಿ ಜನಿಸಿದ್ದರು. 7ನೇ ತರಗತಿ ವರೆಗೆ ವ್ಯಾಸಂಗ ಮಾಡಿರುವ ಇವರು, 9ನೇ ವರ್ಷಕ್ಕೆ ತಂದೆಯಿಂದ ಕಂಸಾಳೆ ಕಲೆ ಕಲಿತರು. ಈ ಮೂಲಕ ಬಾಲ್ಯದಿಂದಲೇ ತಂದೆ ಜತೆಗೆ ಜಾನಪದ ಕಲೆಯಾದ ಕಂಸಾಳೆಯನ್ನು ಮೈಗೂಡಿಸಿಕೊಂಡರು.
ದೆಹಲಿ, ಚೆನ್ನೈ, ಕೇರಳ, ಕೊಲ್ಕತ್ತ ಮಾತ್ರವಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಕಂಸಾಳೆ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈ ವರೆಗೂ ಸಾವಿರಾರು ಮಕ್ಕಳಿಗೆ ಕಂಸಾಳೆ ಕಲೆಯನ್ನು ಹೇಳಿಕೊಟ್ಟಿದ್ದರು.
ನಟ ಶಿವರಾಜ್ ಕುಮಾರ್ ಅಭಿನಯದ ಜನುಮದ ಜೋಡಿ ಚಿತ್ರದ ಕೋಲುಮಂಡೆ ಹಾಡಿನ ಕಂಸಾಳೆ ಸಂಗೀತದ ನೃತ್ಯ ಸಂಯೋಜನೆ ಮಾಡಿ ಹೆಸರುವಾಸಿಯಾಗಿದ್ದರು. ಕರ್ನಾಟಕ ಜಾನಪದ ಅಕಾಡೆಮಿಯಿಂದ 2020ನೇ ಸಾಲಿನ ರಾಜ್ಯಮಟ್ಟ ಪ್ರಶಸ್ತಿಗೂ ಭಾಜನರಾಗಿದ್ದರು. ಜತೆಗೆ, ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…