ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು.
ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಂಸಾಳೆ ಮಹಾದೇವಯ್ಯನವರ ಸುಪುತ್ರರಾದ ಕುಮಾರಸ್ವಾಮಿ ಅವರು 1951ರಲ್ಲಿ ಮೈಸೂರಿನ ಬಂಡಿಕೇರಿಯಲ್ಲಿ ಜನಿಸಿದ್ದರು. 7ನೇ ತರಗತಿ ವರೆಗೆ ವ್ಯಾಸಂಗ ಮಾಡಿರುವ ಇವರು, 9ನೇ ವರ್ಷಕ್ಕೆ ತಂದೆಯಿಂದ ಕಂಸಾಳೆ ಕಲೆ ಕಲಿತರು. ಈ ಮೂಲಕ ಬಾಲ್ಯದಿಂದಲೇ ತಂದೆ ಜತೆಗೆ ಜಾನಪದ ಕಲೆಯಾದ ಕಂಸಾಳೆಯನ್ನು ಮೈಗೂಡಿಸಿಕೊಂಡರು.
ದೆಹಲಿ, ಚೆನ್ನೈ, ಕೇರಳ, ಕೊಲ್ಕತ್ತ ಮಾತ್ರವಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಕಂಸಾಳೆ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈ ವರೆಗೂ ಸಾವಿರಾರು ಮಕ್ಕಳಿಗೆ ಕಂಸಾಳೆ ಕಲೆಯನ್ನು ಹೇಳಿಕೊಟ್ಟಿದ್ದರು.
ನಟ ಶಿವರಾಜ್ ಕುಮಾರ್ ಅಭಿನಯದ ಜನುಮದ ಜೋಡಿ ಚಿತ್ರದ ಕೋಲುಮಂಡೆ ಹಾಡಿನ ಕಂಸಾಳೆ ಸಂಗೀತದ ನೃತ್ಯ ಸಂಯೋಜನೆ ಮಾಡಿ ಹೆಸರುವಾಸಿಯಾಗಿದ್ದರು. ಕರ್ನಾಟಕ ಜಾನಪದ ಅಕಾಡೆಮಿಯಿಂದ 2020ನೇ ಸಾಲಿನ ರಾಜ್ಯಮಟ್ಟ ಪ್ರಶಸ್ತಿಗೂ ಭಾಜನರಾಗಿದ್ದರು. ಜತೆಗೆ, ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…