ಮೈಸೂರು

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ ಒಳಗಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅವರು, ತಮ್ಮ ಕೃತ್ಯಕ್ಕೆ ಕ್ಷಮೆಯಾಚಿಸಿ ಪ್ರಮಾಣಪತ್ರ ಸಲ್ಲಿಸುವ ಜತೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೂ ಭೇಟಿ ನೀಡಿ ಕ್ಷಮೆ ಕೇಳಲಿದ್ದಾರೆ ಎಂದು ಹಿರಿಯ ವಕೀಲ ಸಜನ್‌ ಪೂವಯ್ಯ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಎಫ್‌ಐಆರ್‌ ರದ್ದು ಕೋರಿ ರಣವೀರ್‌ ಸಿಂಗ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ರಣವೀರ್‌ ಸಿಂಗ್‌ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ ಕ್ಷಮೆ ಕೇಳಿದ್ದಾರೆ. ಆದರೆ ಅದರಲ್ಲಿ ಪ್ರಮಾಣಿಕತೆ ಕಾಣುವುದಿಲ್ಲ. ಹೀಗಾಗಿ ಅವರು ಮೌಖಿಕವಾಗಿ ಕ್ಷಮೆ ಕೋರಬೇಕು ಎಂದು ದೂರುದಾರರ ಪರ ವಕೀಲರು ಕೋರ್ಟ್‌ಗೆ ತಿಳಿಸಿದರು. ಆಗ ಪೀಠ ರಣವೀರ್‌ ಪ್ರಭಾವಿ ನಟರು, ಅವರಿಗೆ ಪಶ್ಚಾತಾಪ ವ್ಯಕ್ತಪಡಿಸುವ ಮನಸ್ಸಿರಬೇಕು ಎಂದು ಹೇಳಿತು. ಆವಾಗ ಇದಕ್ಕೆ ಉತ್ತರಿಸಿದ ರಣವೀರ್‌ ಪರ ವಕೀಲ ಸಜನ್‌ ಪೂವಯ್ಯ, ಕ್ಷಮೆ ಕೋರಿ ರಣವೀರ್‌ ಪ್ರಮಾಣ ಪತ್ರ ಸಲ್ಲಿಸಲಿದ್ದಾರೆ. ಜತೆಗೆ ದೇವಾಲಯಕ್ಕೂ ಭೇಟಿ ನೀಡುತ್ತಾರೆ. ದಿನಾಂಕವನ್ನು ನಿಗದಿಪಡಿಸಿ ನ್ಯಾಯಲಯಕ್ಕೆ ತಿಳಿಸಲಾಗುವುದು ಎಂದರು.

ಇದನ್ನು ಆಲಿಸಿದ ಪೀಠ ಅರ್ಜಿ ವಿಚಾರಣೆಯನ್ನು ಏಪ್ರಿಲ್‌ 10ಕ್ಕೆ ಮುಂದೂಡಿತು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago