Categories: ಮೈಸೂರು

ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ.

ತಾಲ್ಲೂಕಿನಲ್ಲಿ ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರಗಳಿವೆ. ಶುಂಠಿ ಶುದ್ದಿಗಾಗಿ ಈ ಘಟಕಗಳು ಬಳಸುತ್ತಿರುವ ರಾಸಾಯನಿಕಗಳಿಂದ ಕೂಡಿದ ನೀರು ಕಬಿನಿ ನಾಲೆ ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ಇದರಿಂದ ಜಾನುವಾರುಗಳು ಹಾಗೂ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.

ಕೃಷಿಭೂಮಿಯನ್ನು ವಾಣಿಜ್ಯೇತರ ಕೆಲಸಗಳಿಗೆ ಬಳಿಸಿಕೊಳ್ಳುವ ಮುನ್ನ ಅನುಮತಿ ಪಡೆಯಬೇಕು. ಆದರೆ ಕಾನೂನು ಉಲ್ಲಂಘಿಸಿ ಶುದ್ಧೀಕರಣ ಘಟಕ ತೆರೆದಿರುವ ವ್ಯಕ್ತಿಗಳು ರಾಸಾಯನಿಕ ಬಳಸಿ ಶುಂಠಿ ಶುದ್ಧೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.

ಈ ಕುರಿತು ಪುರಸಭೆ ಮುಖ್ಯಾಧಿಕಾರಿ ಸುರೇಶ್‌ ಅವರಿಂದ ಪತ್ರ ನೀಡಿದರೂ ಹಾಗೂ ಕೌನ್ಸಿಲ್‌ ಸಭೆಯಲ್ಲಿ ಚರ್ಚೆ ನಡೆದಿದ್ದರೂ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ಮಾಡುತ್ತಿದ್ದಾರೆ.

ಪರಿಸರ ಇಲಾಖೆ, ಮಾಲಿನ್ಯ ಮಂಡಳಿ, ಪರಿಸರ ಅಭಿಯಂತರರು, ಅರಣ್ಯ ಇಲಾಖೆ, ತಾಲ್ಲೂಕು ಆಡಳಿತಾಧಿಕಾರಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರೂ ಏನು ಪ್ರಯೋಜನವಾಗಿಲ್ಲ. ಇವರ ನಿರ್ಲಕ್ಷ್ಯದಿಂದ ಅಮಾಯಕರ ಜೀವಗಳು ಬಲಿಯಾಗುವ ಸ್ಥಿತಿ ನಿರ್ಮಾಣವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

2 mins ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

7 mins ago

ರಾಜ್ಯದಲ್ಲಿ ಇಂದು ಸಹ ಗುಡುಗು ಸಹಿತ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

36 mins ago

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

53 mins ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

1 hour ago

ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು: ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…

1 hour ago