Categories: ಮೈಸೂರು

ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ.

ತಾಲ್ಲೂಕಿನಲ್ಲಿ ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರಗಳಿವೆ. ಶುಂಠಿ ಶುದ್ದಿಗಾಗಿ ಈ ಘಟಕಗಳು ಬಳಸುತ್ತಿರುವ ರಾಸಾಯನಿಕಗಳಿಂದ ಕೂಡಿದ ನೀರು ಕಬಿನಿ ನಾಲೆ ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ಇದರಿಂದ ಜಾನುವಾರುಗಳು ಹಾಗೂ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.

ಕೃಷಿಭೂಮಿಯನ್ನು ವಾಣಿಜ್ಯೇತರ ಕೆಲಸಗಳಿಗೆ ಬಳಿಸಿಕೊಳ್ಳುವ ಮುನ್ನ ಅನುಮತಿ ಪಡೆಯಬೇಕು. ಆದರೆ ಕಾನೂನು ಉಲ್ಲಂಘಿಸಿ ಶುದ್ಧೀಕರಣ ಘಟಕ ತೆರೆದಿರುವ ವ್ಯಕ್ತಿಗಳು ರಾಸಾಯನಿಕ ಬಳಸಿ ಶುಂಠಿ ಶುದ್ಧೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.

ಈ ಕುರಿತು ಪುರಸಭೆ ಮುಖ್ಯಾಧಿಕಾರಿ ಸುರೇಶ್‌ ಅವರಿಂದ ಪತ್ರ ನೀಡಿದರೂ ಹಾಗೂ ಕೌನ್ಸಿಲ್‌ ಸಭೆಯಲ್ಲಿ ಚರ್ಚೆ ನಡೆದಿದ್ದರೂ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ಮಾಡುತ್ತಿದ್ದಾರೆ.

ಪರಿಸರ ಇಲಾಖೆ, ಮಾಲಿನ್ಯ ಮಂಡಳಿ, ಪರಿಸರ ಅಭಿಯಂತರರು, ಅರಣ್ಯ ಇಲಾಖೆ, ತಾಲ್ಲೂಕು ಆಡಳಿತಾಧಿಕಾರಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರೂ ಏನು ಪ್ರಯೋಜನವಾಗಿಲ್ಲ. ಇವರ ನಿರ್ಲಕ್ಷ್ಯದಿಂದ ಅಮಾಯಕರ ಜೀವಗಳು ಬಲಿಯಾಗುವ ಸ್ಥಿತಿ ನಿರ್ಮಾಣವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

53 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

57 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago