ಮೈಸೂರು

ಕರ್ನಾಟಕ ಬಜೆಟ್‌ : ಬಜೆಟ್‌ ಕುರಿತು ರೈತ ಸಂಘ ಅಸಮಾಧಾನ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ೨೦೨೫-೨೬ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ.  ಬಜೆಟ್‌ ಮೇಲೆ ರೈತ ಸಂಘ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅವೆಲ್ಲಾ ಹುಸಿಯಾಗಿದೆ.  ಸಿಎಂ ಸಿದ್ದರಾಮಯ್ಯ ಅವರು ರೈತರ ಮೂಗಿಗೆ  ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ರೈತ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಬಜೆಟ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಭಾಗ್ಯರಾಜು, ಬಜೆಟ್ ನಲ್ಲಿ ರಾಜ್ಯ ಸರ್ಕಾರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ.  ರೈತರ ಅಭಿವೃದ್ಧಿ ಬಗ್ಗೆ ಮಾತನಾಡುವ ಸರ್ಕಾರ ಕೃಷಿ ಪತ್ತಿನ ಸಹಕಾರ ಸಂಘದ ಸಾಲ ಮನ್ನ ವಿಚಾರ ಬಜೆಟ್ ನಲ್ಲಿ ಪ್ರಸ್ತಾಪ ಇಲ್ಲ. ಕಾರ್ಖಾನೆಗಳಿಂದ ಕಬ್ಬಿನ ಬಾಕಿ ಹಣದ ಪ್ರಸ್ತಾಪವೂ ಇಲ್ಲ ಎಂದರು.

ರೈತರ ಬೆಳೆ ಸಂರಕ್ಷಣೆ ವಿಚಾರದಲ್ಲಿ ಸ್ಟೋರೇಜ್ ವಿಚಾರ ಕೂಡ ಪ್ರಸ್ತಾಪವಿಲ್ಲ. ಎಪಿಎಂಸಿ ತಿದ್ದಪಡಿ ಕಾಯ್ದೆ ಬಗ್ಗೆ ಕೂಡ ಮಾತನಾಡಿಲ್ಲ. ರೈತರ ಅಭಿವೃದ್ಧಿಗೆ ಬಜೆಟ್ ನಲ್ಲಿ ಯಾವುದೆ ವೈಜ್ಞಾನಿಕ ಮಾನದಂಡ ಅನುಸರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

12 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

21 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

21 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

21 hours ago