ಮೈಸೂರು

ನಾಳೆ ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ 20ನೇ ವಾರ್ಷಿಕ ಘಟಿಕೋತ್ಸವವು ಮಾ. 27ರಂದು ಬೆಳಿಗ್ಗೆ 11ಕ್ಕೆ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.

ಮುಕ್ತ ವಿವಿಯ ಅತಿಥಿಗೃಹದಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಘಟಿಕೋತ್ಸವದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು. ಕೌಶಲ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಕುಮಾರ್ ತಿವಾರಿ ಘಟಿಕೋತ್ಸವ ಭಾಷಣ ಮಾಡುವರು ಎಂದರು.

ಲೋಕೋಪಯೋಗಿ ಸಚಿವ ಸತೀಶ ಎಲ್.ಜಾರಕಿಹೊಳಿ, ಚಿತ್ರದುರ್ಗದ ಐಡಿಯಲ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸಿ.ಎಂ.ಇರ್ಫಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ದಾಕ್ಷಾಯಿಣಿ ಎಸ್. ಅಪ್ಪಾ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವುದಾಗಿ ಅವರು ಹೇಳಿದರು.

ಈ ಬಾರಿ 17 ಮಂದಿ ಮಹಿಳೆಯರು ಸೇರಿ 41 ಮಂದಿ ಪಿಎಚ್.ಡಿ ಪಡೆಯುತ್ತಿದ್ದು, 55 ಮಂದಿ ಚಿನ್ನದ ಪದಕ ಹಾಗೂ 58 ಮಂದಿ ನಗದು ಬಹುಮಾನಕ್ಕೆ ಭಾಜನರಾಗಿದ್ದಾರೆ. ಇವರನ್ನೂ ಒಳಗೊಂಡಂತೆ 17,388 ಮಂದಿ ವಿವಿಧ ಪದವಿ ಪಡೆಯಲು ಅರ್ಹರಿದ್ದು, ಈ ಪೈಕಿ6402ಪುರುಷರು ಮತ್ತು10946 ಮಂದಿ ಮಹಿಳೆಯರು ಇದ್ದಾರೆ ಎಂದರು.

15,409 ಮಂದಿ ಮಹಿಳಾ ಅಭ್ಯರ್ಥಿಗಳು ಸೇರಿ ಈ ಬಾರಿ 25109 ಮಂದಿ ಪರೀಕ್ಷೆಗೆ ಹಾಜರಾಗಿದ್ದು,17307 ಮಂದಿ ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ ಮಹಿಳೆಯರ ಪಾಲು ಶೇ. 70.92ಇದೆ. ಅರ್ಥಶಾಸ್ತ್ರದಲ್ಲಿ 9, ವಾಣಿಜ್ಯಶಾಸ್ತ್ರದಲ್ಲಿ 7, ರಾಜ್ಯಶಾಸ್ತ್ರ ಮತ್ತು ನಿರ್ವಹಣ ಶಾಸ್ತ್ರದಲ್ಲಿ ತಲಾ 6 ಮಂದಿ, ಕನ್ನಡ ವಿಷಯದಲ್ಲಿ 5 ಮಂದಿ, ಇತಿಹಾಸದಲ್ಲಿ 4, ಸೂಕ್ಷ್ಮಜೀವ ವಿಜ್ಞಾನದಲ್ಲಿ 2, ಇಂಗ್ಲಿಷ್ ಮತ್ತು ಆಹಾರ ವಿಜ್ಞಾನ ಮತ್ತು ಪೋಷಣೆ ವಿಷಯಗಳಲ್ಲಿ ತಲಾ ಒಬ್ಬೊಬ್ಬರು ಪಿಎಚ್.ಡಿ ಪದವಿ ಪಡೆದಿದ್ದಾರೆ.

ಸಚಿವರಿಗೆ ಗೌರವ ಡಾಕ್ಟರೇಟ್ ಸಮರ್ಥನೆ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ರಾಜಕೀಯದ ಕಾರಣಕ್ಕಾಗಲಿ, ಸಚಿವರು ಎಂಬ ಕಾರಣಕ್ಕೆ ಆಗಲಿ ನಾವು ಗೌರವ ಡಾಕ್ಟರೇಟ್ ನೀಡುತ್ತಿಲ್ಲ. ಬದಲಿಗೆ ಅವರ ಸಮಾಜಪರ ಕಾರ್ಯಕ್ರಮಗಳನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಕುಲಪತಿ ಶರಣಪ್ಪ ವಿ. ಹಲಸೆ ಅವರು ಸಮರ್ಥಿಸಿಕೊಂಡರು.

ಗೌರವ ಡಾಕ್ಟರೇಟ್ ಆಯ್ಕೆಗೆ ಪ್ರತ್ಯೇಕ ಸಮಿತಿ ಇರುತ್ತದೆ. ಅಲ್ಲಿಗೆ ಸಚಿವರು ಅಥವಾ ಅವರ ಬೆಂಬಲಿಗರು ಅರ್ಜಿ ಸಲ್ಲಿಸಿರಬಹುದು. ಇದನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗಿರುತ್ತದೆ ಎಂದರು. ಕಳೆದ ವರ್ಷ 80 ಸಾವಿರ ವಿದ್ಯಾರ್ಥಿಗಳು ನೋಂದಣಿಮಾಡಿಕೊಂಡಿದ್ದು,ಈಗ ಜನವರಿ ಮಾಸದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ವರ್ಷ ಒಂದು ಲಕ್ಷ ನೋಂದಣಿ ದಾಟುವ ಸಾಧ್ಯತೆ ಇದೆ ಎಂದು ಹೇಳಿದರು.

ಕುಲಸಚಿವರಾದ ಡಾ.ಎಚ್.ವಿಶ್ವನಾಥ್, ಪ್ರೊ.ಕೆ.ಬಿ.ಪ್ರವೀಣ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

7 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

9 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

11 hours ago