ಮೈಸೂರು

ಕರ್ನಾಟಕ ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು: ಟಿ ದಿನೇಶ್

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ ದಿನೇಶ್ ತಿಳಿಸಿದರು.

ಸೋಮವಾರ (ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ರಪ್ತು ಹಮ್ಮಿಕೊಂಡಿದ್ದ ರಪ್ತು ನಿರ್ವಹಣಾ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಉದ್ದಿಮೆದಾರರಿಗೆ ನಾನು ಪ್ರತಿದಿನ ಹೊಸತನ್ನು ಕಲಿಯಬೇಕು ಎನ್ನುವ ಹಂಬಲ ಇರಬೇಕು. ದೇಶದಲ್ಲಿ 778 ಮಿಲಿಯನ್ ಡಾಲರ್ ಮೊತ್ತದ ವಸ್ತುಗಳನ್ನು ರಪ್ತು ಮಾಡಿದ್ದು, 860 ಮಿಲಿಯನ್ ಡಾಲರ್ ಮೊತ್ತದ ಸರಕನ್ನು ಆಮದನ್ನು ಮಾಡಿಕೊಂಡಿದ್ದೇವೆ. ಕರ್ನಾಟಕವು ರಪ್ತು ಮಾಡುವುದರಲ್ಲಿ 4ನೇ ಸ್ಥಾನದಲ್ಲಿ ಇದೆ. ನಮ್ಮ ರಾಜ್ಯವು ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು ಎಂದರು.

ಭಾರತ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೇಂದ್ರವನ್ನು ಸ್ಥಾಪಿಸಿದೆ. ಮೈಸೂರು ಜಿಲ್ಲೆಯಲ್ಲಿಯೂ ಕೈಗಾರಿಕೆಗಳ ಸ್ಥಾಪನೆಗೆ ವಿಪುಲ ಅವಕಾಶಗಳಿವೆ. ಪ್ರತಿ ವರ್ಷ ಶೇಕಡಾ 5% ರಫ್ತನ್ನು ಹೆಚ್ಚಳ ಮಾಡಬೇಕು ಎಂದರು.

ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕರಾದ ಸಿ ಎಸ್ ಬಾಬು ನಾಗೇಶ್ ಅವರು ಮಾತನಾಡಿ ತಾವೆಲ್ಲರೂ ಯುವ ಉದ್ಯಮಿಗಳು ಇದ್ದೀರಾ. 6 ದಿನಗಳ ಕಾಲ ಹಮ್ಮಿಕೊಂಡಿರುವ ಹಮ್ಮಿಕೊಂಡಿರುವ ರಪ್ತು ನಿರ್ವಹಣಾ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಿ. ರಪ್ತು ಕೈಗಾರಿಕೆಗಳ ಆರ್ಥಿಕ ಆದಾಯವನ್ನು ಹೆಚ್ಚಿಸುತ್ತದೆ. ಇದರಿಂದ ಹೆಚ್ಚಿನ ಉತ್ಪಾದನೆ ಮಾಡಿ ಕೈಗಾರಿಕೆಯು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ಮೈಸೂರು ಕೈಗಾರಿಕಾ ಸಂಘದ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ ಲಿಂಗರಾಜು, ರಪ್ತು ಮಾಹಿತಿ ಕೇಂದ್ರದ ಉಪ ನಿರ್ದೇಶಕರಾದ ಮೇಘಲಾ ಸೇರಿದಂತೆ ಕೈಗಾರಿಕೋದ್ಯಮಿಗಳು ಉಪಸ್ತಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

10 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

14 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

14 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

20 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

20 hours ago