ಮೈಸೂರು

ಕರ್ನಾಟಕ ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು: ಟಿ ದಿನೇಶ್

ಮೈಸೂರು: ರಪ್ತು ಮಾಡುವುದರಿಂದ ವಿದೇಶಿ ವಿನಿಮಯದ ಜೊತೆಗೆ ದೇಶದ ಆದಾಯವನ್ನು ಹೆಚ್ಚಿಸುತ್ತದೆ. ಅಲ್ಲದೆ ಕೈಗಾರಿಕೆಗಳಿಗೆ ಉತ್ತೇಜನ ನೀಡುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಟಿ ದಿನೇಶ್ ತಿಳಿಸಿದರು.

ಸೋಮವಾರ (ಜೂ.24) ನಗರದ ಹೋಟೆಲ್ ಪ್ರೆಸಿಡೆಂಟ್ನಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ರಪ್ತು ಹಮ್ಮಿಕೊಂಡಿದ್ದ ರಪ್ತು ನಿರ್ವಹಣಾ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಉದ್ದಿಮೆದಾರರಿಗೆ ನಾನು ಪ್ರತಿದಿನ ಹೊಸತನ್ನು ಕಲಿಯಬೇಕು ಎನ್ನುವ ಹಂಬಲ ಇರಬೇಕು. ದೇಶದಲ್ಲಿ 778 ಮಿಲಿಯನ್ ಡಾಲರ್ ಮೊತ್ತದ ವಸ್ತುಗಳನ್ನು ರಪ್ತು ಮಾಡಿದ್ದು, 860 ಮಿಲಿಯನ್ ಡಾಲರ್ ಮೊತ್ತದ ಸರಕನ್ನು ಆಮದನ್ನು ಮಾಡಿಕೊಂಡಿದ್ದೇವೆ. ಕರ್ನಾಟಕವು ರಪ್ತು ಮಾಡುವುದರಲ್ಲಿ 4ನೇ ಸ್ಥಾನದಲ್ಲಿ ಇದೆ. ನಮ್ಮ ರಾಜ್ಯವು ರಫ್ತಿನಲ್ಲಿ ಮೊದಲ ಸ್ಥಾನಕ್ಕೆ ಬರಬೇಕು ಎಂದರು.

ಭಾರತ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ರಫ್ತು ಉತ್ತೇಜನ ಕೇಂದ್ರವನ್ನು ಸ್ಥಾಪಿಸಿದೆ. ಮೈಸೂರು ಜಿಲ್ಲೆಯಲ್ಲಿಯೂ ಕೈಗಾರಿಕೆಗಳ ಸ್ಥಾಪನೆಗೆ ವಿಪುಲ ಅವಕಾಶಗಳಿವೆ. ಪ್ರತಿ ವರ್ಷ ಶೇಕಡಾ 5% ರಫ್ತನ್ನು ಹೆಚ್ಚಳ ಮಾಡಬೇಕು ಎಂದರು.

ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕರಾದ ಸಿ ಎಸ್ ಬಾಬು ನಾಗೇಶ್ ಅವರು ಮಾತನಾಡಿ ತಾವೆಲ್ಲರೂ ಯುವ ಉದ್ಯಮಿಗಳು ಇದ್ದೀರಾ. 6 ದಿನಗಳ ಕಾಲ ಹಮ್ಮಿಕೊಂಡಿರುವ ಹಮ್ಮಿಕೊಂಡಿರುವ ರಪ್ತು ನಿರ್ವಹಣಾ ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಿ. ರಪ್ತು ಕೈಗಾರಿಕೆಗಳ ಆರ್ಥಿಕ ಆದಾಯವನ್ನು ಹೆಚ್ಚಿಸುತ್ತದೆ. ಇದರಿಂದ ಹೆಚ್ಚಿನ ಉತ್ಪಾದನೆ ಮಾಡಿ ಕೈಗಾರಿಕೆಯು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ಮೈಸೂರು ಕೈಗಾರಿಕಾ ಸಂಘದ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ ಲಿಂಗರಾಜು, ರಪ್ತು ಮಾಹಿತಿ ಕೇಂದ್ರದ ಉಪ ನಿರ್ದೇಶಕರಾದ ಮೇಘಲಾ ಸೇರಿದಂತೆ ಕೈಗಾರಿಕೋದ್ಯಮಿಗಳು ಉಪಸ್ತಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

10 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

10 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

10 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

10 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago