ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರವಹಿಸಲು ಕ್ರಮವಹಿಸಲಾಗಿದೆ.
ಸೆಸ್ಕ್ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭವಾಗಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಅತಿಯಾದ ಗಾಳಿ ಮತ್ತು ಮಳೆಯಿಂದ ವಿದ್ಯುತ್ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಮಳೆಯಿಂದ ಸಂಭವಿಸಬಹುದಾದ ವಿದ್ಯುತ್ ಅವಘಡಗಳು ಹಾಗೂ ತೊಂದರೆಗಳನ್ನು ಎದುರಿಸಲು ಸೆಸ್ಕ್ ಸನ್ನದ್ಧವಾಗಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೆಸ್ಕ್ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯ ಸಂದರ್ಭದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸೆಸ್ಕ್ ಸನ್ನದ್ಧವಾಗಿದ್ದರೆ. ಗ್ರಾಹಕರ ಸುರಕ್ಷತೆ ಬಗ್ಗೆಯೂ ಹೆಚ್ಚಿನ ನಿಗಾವಹಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಹಕರಿಗೆ ಅಗತ್ಯವಾದ ಸೇವೆ ನೀಡಲು ಕಾರ್ಯಪ್ರವೃತ್ತರಾಗಿದ್ದಾರೆ. ಅದರಂತೆ ಸಾರ್ವಜನಿಕರು ಅತಿಯಾದ ಗಾಳಿ ಮತ್ತು ಮಳೆಯ ಸಂದರ್ಭದಲ್ಲಿ ವಿದ್ಯುತ್ ಅಪಾಯಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆವಹಿಸಲು ಕೋರಲಾಗಿದೆ.
ಅಲ್ಲದೇ ತಮ್ಮ ಸುತ್ತಮುಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ತಂತಿಗಳು ತುಂಡಾಗಿರುವುದು, ವಿದ್ಯುತ್ ಕಂಬಗಳು ಹಾನಿಯಾಗಿರುವುದು ಅಥವಾ ಟ್ರಾನ್ಸ್ಫಾರ್ಮರ್ಗಳಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ತುರ್ತಾಗಿ 24*7 ಸಹಾಯವಾಣಿ 1912 ಅಥವಾ ನಿಗಮದ ವಾಟ್ಸಾಪ್ ಸಂಖ್ಯೆ 9448991912 ಸಂಖ್ಯೆಗೆ ಫೋಟೋ ಸಹಿತವಾಗಿ ಮಾಹಿತಿ ನೀಡುವಂತೆ ಅಥವಾ ಸ್ಥಳೀಯ ಸೆಸ್ಕ್ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡುವಂತೆ ಸೆಸ್ಕ್ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…