ಮೈಸೂರು

ಗಾಳಿ, ಮಳೆಯ ವೇಳೆ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ

  • ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್‌ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರವಹಿಸಲು ಕ್ರಮವಹಿಸಲಾಗಿದೆ.

ಸೆಸ್ಕ್ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭವಾಗಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಅತಿಯಾದ ಗಾಳಿ ಮತ್ತು ಮಳೆಯಿಂದ ವಿದ್ಯುತ್ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಮಳೆಯಿಂದ ಸಂಭವಿಸಬಹುದಾದ ವಿದ್ಯುತ್‌ ಅವಘಡಗಳು ಹಾಗೂ ತೊಂದರೆಗಳನ್ನು ಎದುರಿಸಲು ಸೆಸ್ಕ್ ಸನ್ನದ್ಧವಾಗಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯ ಸಂದರ್ಭದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸೆಸ್ಕ್‌ ಸನ್ನದ್ಧವಾಗಿದ್ದರೆ. ಗ್ರಾಹಕರ ಸುರಕ್ಷತೆ ಬಗ್ಗೆಯೂ ಹೆಚ್ಚಿನ ನಿಗಾವಹಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಹಕರಿಗೆ ಅಗತ್ಯವಾದ ಸೇವೆ ನೀಡಲು ಕಾರ್ಯಪ್ರವೃತ್ತರಾಗಿದ್ದಾರೆ. ಅದರಂತೆ ಸಾರ್ವಜನಿಕರು ಅತಿಯಾದ ಗಾಳಿ ಮತ್ತು ಮಳೆಯ ಸಂದರ್ಭದಲ್ಲಿ ವಿದ್ಯುತ್ ಅಪಾಯಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆವಹಿಸಲು ಕೋರಲಾಗಿದೆ.

ಅಲ್ಲದೇ ತಮ್ಮ ಸುತ್ತಮುಲ್ಲಿನ ಪ್ರದೇಶಗಳಲ್ಲಿ ವಿದ್ಯುತ್‌ ತಂತಿಗಳು ತುಂಡಾಗಿರುವುದು, ವಿದ್ಯುತ್‌ ಕಂಬಗಳು ಹಾನಿಯಾಗಿರುವುದು ಅಥವಾ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ತುರ್ತಾಗಿ 24*7 ಸಹಾಯವಾಣಿ 1912 ಅಥವಾ ನಿಗಮದ ವಾಟ್ಸಾಪ್‌ ಸಂಖ್ಯೆ 9448991912 ಸಂಖ್ಯೆಗೆ ಫೋಟೋ ಸಹಿತವಾಗಿ ಮಾಹಿತಿ ನೀಡುವಂತೆ ಅಥವಾ ಸ್ಥಳೀಯ ಸೆಸ್ಕ್‌ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡುವಂತೆ ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು

  • ರಸ್ತೆ ಬದಿ ಅಥವಾ ಇತರೆ ಕಡೆಗಳಲ್ಲಿ ತುಂಡಾಗಿ ಬಿದ್ದ ತಂತಿಗಳನ್ನು ಮುಟ್ಟಬಾರದು.
  • ಬಟ್ಟೆ ಒಣಗಿಸಲು ವಿದ್ಯುತ್‌ ಕಂಬಗಳು, ವೈಯರ್‌ಗಳನ್ನು ಬಳಸಬಾರದು.
  • ವಿದ್ಯುತ್‌ ಕಂಬಗಳು ಅಥವಾ ಟ್ರಾನ್ಸ್‌ಫಾರ್ಮರ್‌ ಅಕ್ಕಪಕ್ಕದಲ್ಲಿ ದನಕರುಗಳನ್ನು ಕಟ್ಟಿ ಹಾಕಬಾರದು.
  • ಮಳೆ ಹಾಗೂ ಗಾಳಿಯ ಸಂದರ್ಭದಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಸಮೀಪ ನಿಲ್ಲದಂತೆ ಎಚ್ಚರ ವಹಿಸುವುದು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago