ಮೈಸೂರು

ಕಾರ್ತಿಕ್ ಕೊಲೆ ಪ್ರಕರಣ : ಪರ-ವಿರೋಧ ಪೋಸ್ಟ್ ಮಾಡಿದ್ರೆ ಕ್ರಮ ; ಪೊಲೀಸ್ ಕಮಿಷನರ್ ಎಚ್ಚರಿಕೆ

‌ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕದಗೆಡುವ ರೀತಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.

ಮೇ 5ರಂದು ಮೈಸೂರು ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆಯಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇದಾದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಪರ ವಿರೋಧ ಚರ್ಚೆಯ ಜೊತೆಗೆ ಓಪನ್ ಚಾಲೆಂಜ್ ಹಾಕಲಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವ ರೀತಿಯಲ್ಲಿ ಪೋಸ್ಟ್ ಗಳನ್ನು ಹಾಕಿದ್ 15ಕ್ಕೂ ಹೆಚ್ಚು ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಕಮಿಷನರ ತಿಳಿಸಿದರು.

ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ರೀತಿ ಪೋಸ್ಟ್ ಹಾಕಿದರೆ ಕಾನೂನು ಕ್ರಮ ಜರುಗಿಸುತ್ತೇವೆ. ಇದಕ್ಕಾಗಿಯೇ 52 ಮಂದಿ ಪೊಲೀಸರನ್ನು ಒಳಗೊಂಡ ಸೋಷಿಯಲ್ ಮೀಡಿಯಾ ಮಾನಿಟರ್ ತಂಡವನ್ನು ನಿಯೋಜಿಸಲಾಗಿದೆ.
ಈ ತಂಡ ದಿನವೂ ಮಾನಿಟರ್ ಮಾಡುತ್ತಿದೆ. ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸಮಾಜ ವಿರೋಧಿ ಪೋಸ್ಟ್ ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚೆಗೆ ರೌಡಿ ಪೆರೇಡ್ ನಡೆಸಲಾಗಿದೆ. 15 ದಿನಕ್ಕೊಮ್ಮೆ ರೌಡಿಗಳ ಪೆರೇಡ್ ನಡೆಸಲಾಗುತ್ತಿದೆ. ರೌಡಿಶೀಟರ್ ಗಳ ಮೇಲೂ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಅವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

12 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

12 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

12 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

12 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

12 hours ago