ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕದಗೆಡುವ ರೀತಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.
ಮೇ 5ರಂದು ಮೈಸೂರು ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆಯಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇದಾದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಪರ ವಿರೋಧ ಚರ್ಚೆಯ ಜೊತೆಗೆ ಓಪನ್ ಚಾಲೆಂಜ್ ಹಾಕಲಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವ ರೀತಿಯಲ್ಲಿ ಪೋಸ್ಟ್ ಗಳನ್ನು ಹಾಕಿದ್ 15ಕ್ಕೂ ಹೆಚ್ಚು ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಕಮಿಷನರ ತಿಳಿಸಿದರು.
ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ರೀತಿ ಪೋಸ್ಟ್ ಹಾಕಿದರೆ ಕಾನೂನು ಕ್ರಮ ಜರುಗಿಸುತ್ತೇವೆ. ಇದಕ್ಕಾಗಿಯೇ 52 ಮಂದಿ ಪೊಲೀಸರನ್ನು ಒಳಗೊಂಡ ಸೋಷಿಯಲ್ ಮೀಡಿಯಾ ಮಾನಿಟರ್ ತಂಡವನ್ನು ನಿಯೋಜಿಸಲಾಗಿದೆ.
ಈ ತಂಡ ದಿನವೂ ಮಾನಿಟರ್ ಮಾಡುತ್ತಿದೆ. ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸಮಾಜ ವಿರೋಧಿ ಪೋಸ್ಟ್ ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇತ್ತೀಚೆಗೆ ರೌಡಿ ಪೆರೇಡ್ ನಡೆಸಲಾಗಿದೆ. 15 ದಿನಕ್ಕೊಮ್ಮೆ ರೌಡಿಗಳ ಪೆರೇಡ್ ನಡೆಸಲಾಗುತ್ತಿದೆ. ರೌಡಿಶೀಟರ್ ಗಳ ಮೇಲೂ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…