ಮೈಸೂರು

ಗೀತಾ ಶಿವಣ್ಣ ಓಕೆ, ಗೀತಾ ಬಂಗಾರಪ್ಪ ಓಕೆ.. ರಾಜ್‌ಕುಮಾರ್‌ ಯಾಕೆ? ಕೌಟಿಲ್ಯ ರಘು ಕಿಡಿ

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಟಿಕೆಟ್‌ ಪಡೆದಿರುವ ಅಭ್ಯರ್ಥಿಗಳು ಮತದಾರರ ಮನ ಸೆಳೆಯಲು ತಾಲೀಮು ನಡೆಸುತ್ತಿದ್ದಾರೆ. ಇನ್ನು ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌ ಕಣಕ್ಕಿಳಿಯುತ್ತಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಕೌಟಿಲ್ಯ ರಘು ಪ್ರತಿಕ್ರಿಯಿಸಿದ್ದು ಚುನಾವಣೆಗಾಗಿ ರಾಜ್‌ಕುಮಾರ್‌ ಹೆಸರು ಬಳಕೆಯಾಗಬಾರದು ಎಂದು ಹೇಳಿಕೆ ನೀಡಿದ್ದಾರೆ.

ನ್ಯೂಸ್‌ ಒನ್‌ ಚಾನೆಲ್‌ ಜತೆ ಮಾತನಾಡಿರುವ ಕೌಟಿಲ್ಯ ರಘು ತಾನೊಬ್ಬ ರಾಜ್‌ಕುಮಾರ್‌ ಕಟ್ಟಾಭಿಮಾನಿ ಎಂಬುದು ಬಹುತೇಕರಿಗೆ ತಿಳಿದಿದೆ. ರಾಜಕೀಯದಿಂದ ಬಹುದೊಡ್ಡ ಅಂತರ ಕಾಯ್ದುಕೊಂಡ ರಾಜ್‌ಕುಮಾರ್ ಸಿನಿಮಾಗಳಲ್ಲಿಯೂ ಸಹ ಅದನ್ನು ಅಳವಡಿಸಿಕೊಳ್ಳದೇ ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ, ಸಾಂಸ್ಕೃತಿಕವಾಗಿ ಕ್ರಾಂತಿಯನ್ನು ಮಾಡಿದ್ದರು.

ಅಂತಹ ಕುಟುಂಬಸ್ಥರಾಗಿ ಶಿವಣ್ಣ ಅವರು ಅವರ ಪತ್ನಿಯನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಅದಕ್ಕೆ ಯಾರ ಆಕ್ಷೇಪವೂ ಇಲ್ಲ. ಅವರು ದೊಡ್ಮನೆ ಸೊಸೆ ಎಂದು ಬಿಂಬಿಸಿಕೊಂಡವರು. ಆದರೆ ಚುನಾವಣೆಗೆ ನಿಲ್ಲುವಂತಹ ಸಂದರ್ಭದಲ್ಲಿ ಅವರು ಬಂಗಾರಪ್ಪನವರ ಪುತ್ರಿ ಅಥವಾ ಶಿವಣ್ಣನವರ ಪತ್ನಿ ಎಂದು ಹೇಳಿಕೊಂಡು ಪ್ರಚಾರ ಮಾಡಬೇಕು ಎಂಬುವುದು ನನ್ನ ನೇರ ಒತ್ತಾಯ ಮತ್ತು ಆಗ್ರಹ. ಏಕೆಂದರೆ ಶಿವಣ್ಣ ಓಕೆ, ಚುನಾವಣೆಯಲ್ಲಿ ರಾಜ್‌ಕುಮಾರ್‌ ಯಾಕೆ? ಗೀತಾ ಶಿವಣ್ಣ ಓಕೆ, ಗೀತಾ ಬಂಗಾರಪ್ಪ ಓಕೆ, ರಾಜ್‌ಕುಮಾರ್‌ ಯಾಕೆ? ರಾಜ್‌ಕುಮಾರ್‌ಗೂ ರಾಜಕೀಯಕ್ಕೂ ಸಂಬಂಧ ಇಲ್ಲ.

ರಾಜ್‌ಕುಮಾರ್‌ರವರಿಗೆ ಸಂಬಂಧ ಇರುವುದು ಕನ್ನಡಿಗರು, ಕನ್ನಡ, ನಾಡು, ನುಡಿ, ಜನ. ಇದನ್ನು ಹೊರತುಪಡಿಸಿ ರಾಜಕೀಯ ಯಾವುದೇ ಕಾರಣಕ್ಕೂ ಹತ್ತಿರ ಸೇರಿಸಿದವರಲ್ಲ. ಹೀಗಾಗಿ ಕೋಟ್ಯಂತರ ರಾಜ್‌ಕುಮಾರ್‌ ಅಭಿಮಾನಿಗಳ ಮನಸ್ಸನ್ನು ಘಾಸಿ ಮಾಡಬೇಡಿ, ನಿಮ್ಮ ರಾಜಕೀಯ ವ್ಯಾಪಾರ ಮಾಡಿಕೊಳ್ಳಿ, ಅದಕ್ಕೆ ನಮ್ಮ ತಕರಾರಿಲ್ಲ ಎಂದರು. ಅಲ್ಲದೇ ಈ ಕುರಿತಾಗಿ ಚುನಾವಣೆ ನೀತಿಸಂಹಿತೆ ಮುಗಿಯುವವರೆಗೂ ಶಿವಣ್ಣ ಅವರ ಯಾವುದೇ ಚಲನಚಿತ್ರಗಳನ್ನು, ಜಾಹೀರಾತುಗಳನ್ನು ಮಾಧ್ಯಮಗಳಲ್ಲಾಗಲಿ, ಪತ್ರಿಕೆಗಳಲ್ಲಾಗಲಿ, ಚಿತ್ರಮಂದಿರಗಳಲ್ಲಾಗಲಿ ಪ್ರಸಾರ ಆಗಬಾರದು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ ಎಂದೂ ಸಹ ಕೌಟಿಲ್ಯ ರಘು ತಿಳಿಸಿದರು.

andolana

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

8 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

9 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

10 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

10 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

10 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

12 hours ago