ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಮತದಾರರ ಮನ ಸೆಳೆಯಲು ತಾಲೀಮು ನಡೆಸುತ್ತಿದ್ದಾರೆ. ಇನ್ನು ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ಕುಮಾರ್ ಕಣಕ್ಕಿಳಿಯುತ್ತಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ಕೌಟಿಲ್ಯ ರಘು ಪ್ರತಿಕ್ರಿಯಿಸಿದ್ದು ಚುನಾವಣೆಗಾಗಿ ರಾಜ್ಕುಮಾರ್ ಹೆಸರು ಬಳಕೆಯಾಗಬಾರದು ಎಂದು ಹೇಳಿಕೆ ನೀಡಿದ್ದಾರೆ.
ನ್ಯೂಸ್ ಒನ್ ಚಾನೆಲ್ ಜತೆ ಮಾತನಾಡಿರುವ ಕೌಟಿಲ್ಯ ರಘು ತಾನೊಬ್ಬ ರಾಜ್ಕುಮಾರ್ ಕಟ್ಟಾಭಿಮಾನಿ ಎಂಬುದು ಬಹುತೇಕರಿಗೆ ತಿಳಿದಿದೆ. ರಾಜಕೀಯದಿಂದ ಬಹುದೊಡ್ಡ ಅಂತರ ಕಾಯ್ದುಕೊಂಡ ರಾಜ್ಕುಮಾರ್ ಸಿನಿಮಾಗಳಲ್ಲಿಯೂ ಸಹ ಅದನ್ನು ಅಳವಡಿಸಿಕೊಳ್ಳದೇ ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ, ಸಾಂಸ್ಕೃತಿಕವಾಗಿ ಕ್ರಾಂತಿಯನ್ನು ಮಾಡಿದ್ದರು.
ಅಂತಹ ಕುಟುಂಬಸ್ಥರಾಗಿ ಶಿವಣ್ಣ ಅವರು ಅವರ ಪತ್ನಿಯನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ಅದಕ್ಕೆ ಯಾರ ಆಕ್ಷೇಪವೂ ಇಲ್ಲ. ಅವರು ದೊಡ್ಮನೆ ಸೊಸೆ ಎಂದು ಬಿಂಬಿಸಿಕೊಂಡವರು. ಆದರೆ ಚುನಾವಣೆಗೆ ನಿಲ್ಲುವಂತಹ ಸಂದರ್ಭದಲ್ಲಿ ಅವರು ಬಂಗಾರಪ್ಪನವರ ಪುತ್ರಿ ಅಥವಾ ಶಿವಣ್ಣನವರ ಪತ್ನಿ ಎಂದು ಹೇಳಿಕೊಂಡು ಪ್ರಚಾರ ಮಾಡಬೇಕು ಎಂಬುವುದು ನನ್ನ ನೇರ ಒತ್ತಾಯ ಮತ್ತು ಆಗ್ರಹ. ಏಕೆಂದರೆ ಶಿವಣ್ಣ ಓಕೆ, ಚುನಾವಣೆಯಲ್ಲಿ ರಾಜ್ಕುಮಾರ್ ಯಾಕೆ? ಗೀತಾ ಶಿವಣ್ಣ ಓಕೆ, ಗೀತಾ ಬಂಗಾರಪ್ಪ ಓಕೆ, ರಾಜ್ಕುಮಾರ್ ಯಾಕೆ? ರಾಜ್ಕುಮಾರ್ಗೂ ರಾಜಕೀಯಕ್ಕೂ ಸಂಬಂಧ ಇಲ್ಲ.
ರಾಜ್ಕುಮಾರ್ರವರಿಗೆ ಸಂಬಂಧ ಇರುವುದು ಕನ್ನಡಿಗರು, ಕನ್ನಡ, ನಾಡು, ನುಡಿ, ಜನ. ಇದನ್ನು ಹೊರತುಪಡಿಸಿ ರಾಜಕೀಯ ಯಾವುದೇ ಕಾರಣಕ್ಕೂ ಹತ್ತಿರ ಸೇರಿಸಿದವರಲ್ಲ. ಹೀಗಾಗಿ ಕೋಟ್ಯಂತರ ರಾಜ್ಕುಮಾರ್ ಅಭಿಮಾನಿಗಳ ಮನಸ್ಸನ್ನು ಘಾಸಿ ಮಾಡಬೇಡಿ, ನಿಮ್ಮ ರಾಜಕೀಯ ವ್ಯಾಪಾರ ಮಾಡಿಕೊಳ್ಳಿ, ಅದಕ್ಕೆ ನಮ್ಮ ತಕರಾರಿಲ್ಲ ಎಂದರು. ಅಲ್ಲದೇ ಈ ಕುರಿತಾಗಿ ಚುನಾವಣೆ ನೀತಿಸಂಹಿತೆ ಮುಗಿಯುವವರೆಗೂ ಶಿವಣ್ಣ ಅವರ ಯಾವುದೇ ಚಲನಚಿತ್ರಗಳನ್ನು, ಜಾಹೀರಾತುಗಳನ್ನು ಮಾಧ್ಯಮಗಳಲ್ಲಾಗಲಿ, ಪತ್ರಿಕೆಗಳಲ್ಲಾಗಲಿ, ಚಿತ್ರಮಂದಿರಗಳಲ್ಲಾಗಲಿ ಪ್ರಸಾರ ಆಗಬಾರದು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ ಎಂದೂ ಸಹ ಕೌಟಿಲ್ಯ ರಘು ತಿಳಿಸಿದರು.
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…