ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಶ್ರೀನಿವಾಸ್ ಅವರು, ನಾಡಪ್ರಭು ಕೆಂಪೇಗೌಡರು ವಿಶ್ವದಲ್ಲೇ ಹೆಸರುವಾಸಿಯಾದ ಬೆಂಗಳೂರಿನ ನಿರ್ಮಾತೃ ಆಗಿದ್ದಾರೆ. 16ನೇ ಶತಮಾನದಲ್ಲಿಯೇ ಬೆಂಗಳೂರಿನ ದೂರದೃಷ್ಟಿಯಲ್ಲಿಯೇ ಬೆಂಗಳೂರಿಗೆ ದೂರದೃಷ್ಟಿಯುಳ್ಳ ಚೌಕಟ್ಟನ್ನು ಹಾಕಿದ ಮಹಾನ್ ನಾಯಕರು. ಬೆಂಗಳೂರಿಗೆ ನಾಲ್ಕು ಮಹಾದ್ವಾರಗಳನ್ನು ಕಟ್ಟಿಸಿ, ಹಲವಾರು ಕೆರೆಗಳನ್ನು ನಿರ್ಮಿಸಿ, ಒಂದೊಂದು ಸಮುದಾಯಕ್ಕೂ ಪೇಟೆಗಳನ್ನು ಮೀಸಲಿರಿಸಿ, ಇಡೀ ನಗರವನ್ನು ಗಿಡ ಮರ ನೆಡುವ ಮೂಲಕ ಬೆಂಗಳೂರಿನ ಅಭಿವೃದ್ಧಿಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಆನಂದ್ ಅವರು ಕೆಂಪೇಗೌಡರ ಜೀವನ, ಸಾಧನೆ ಕುರಿತಾಗಿ ಮುಖ್ಯ ಭಾಷಣ ಮಾಡಿ, ಕೆಂಪೇಗೌಡರ ಜೀವನದಲ್ಲಾದ ಅನೇಕ ಬದಲಾವಣೆಗಳನ್ನು ಸಂಪೂರ್ಣವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…