Kerala bus accident Bike rider dies
ಹುಣಸೂರು : ಕೇರಳ ರಾಜ್ಯ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೆದ್ದಾರಿಯ ಬೈಪಾಸ್ನಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲ್ಲೂಕಿನ ಮಂಟಿ ಬಿಳುಗಲಿ ಗ್ರಾಮದ ಗಣೇಶ್ ಪುತ್ರ ದರ್ಶನ್ (೨೧) ಮೃತಪಟ್ಟವರು.
ಇವರಿಗೆ ತಂದೆ, ತಾಯಿ, ಸಹೋದರಿ ಇದ್ದಾರೆ. ಹುಣಸೂರು ಬೈಪಾಸ್ ರಸ್ತೆಯ ಕಾವೇರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ತಜ್ಞರಾಗಿದ್ದ ದರ್ಶನ್ ಎಂದಿನಂತೆ ರಾತ್ರಿ ೧೧ರ ವೇಳೆಯಲ್ಲಿ ಕರ್ತವ್ಯ ಮುಗಿಸಿ ಆಸ್ಪತ್ರೆಯಿಂದ ತಮ್ಮ ಬೈಕಿನಲ್ಲಿ ನಗರದ ಕಡೆಗೆ ತೆರಳಲು ಹೆದ್ದಾರಿಗೆ ಬರುತ್ತಿದ್ದ ವೇಳೆ ಮೈಸೂರು ಕಡೆಯಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಬೈಕ್ ಬಸ್ನ ಮುಂಭಾಗ ಜಖಂಗೊಂಡಿದೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…