ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ.
ರಕ್ಷಿಸಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕ ಮತ್ತು ಕೇರಳ ಗಡಿ ಭಾಗದ (ಡಿ.ಬಿ ಕುಪ್ಪೆ) ಬಾವಲಿ ಚೆಕ್ ಪೋಸ್ಟ್ ನಲ್ಲಿಯೂ ಸಹ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಿ.ಸಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತಜ್ಞ ವೈದ್ಯರ ತಂಡವನ್ನು ನೇಮಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಭೇಟಿ ನೀಡಿ, ಎಲ್ಲಾ ರೀತಿಯ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳುವುದಲ್ಲದೇ ಯಾವುದೇ ಕುಂದುಕೊರತೆ ಇಲ್ಲದಂತೆ ಕರ್ತವ್ಯ ನಿರ್ವಹಿಸಿಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ತಹಶೀಲ್ದಾರ್ ಶ್ರೀನಿವಾಸ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್, ಡಾ ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವೈನಾಡುಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದರು.
ಗಡಿಭಾಗದ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು ನಿಯೋಜನೆ ಮಾಡಿಕೊಂಡಿದ್ದು ಜೊತೆಗೆ ಎಚ್ .ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳನ್ನೂ ಸಿದ್ದಪಡಿಸಿಕೊಂಡಿದ್ದೇವೆ. ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…