ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ.
ರಕ್ಷಿಸಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕ ಮತ್ತು ಕೇರಳ ಗಡಿ ಭಾಗದ (ಡಿ.ಬಿ ಕುಪ್ಪೆ) ಬಾವಲಿ ಚೆಕ್ ಪೋಸ್ಟ್ ನಲ್ಲಿಯೂ ಸಹ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಿ.ಸಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತಜ್ಞ ವೈದ್ಯರ ತಂಡವನ್ನು ನೇಮಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಭೇಟಿ ನೀಡಿ, ಎಲ್ಲಾ ರೀತಿಯ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳುವುದಲ್ಲದೇ ಯಾವುದೇ ಕುಂದುಕೊರತೆ ಇಲ್ಲದಂತೆ ಕರ್ತವ್ಯ ನಿರ್ವಹಿಸಿಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ತಹಶೀಲ್ದಾರ್ ಶ್ರೀನಿವಾಸ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್, ಡಾ ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವೈನಾಡುಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದರು.
ಗಡಿಭಾಗದ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು ನಿಯೋಜನೆ ಮಾಡಿಕೊಂಡಿದ್ದು ಜೊತೆಗೆ ಎಚ್ .ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳನ್ನೂ ಸಿದ್ದಪಡಿಸಿಕೊಂಡಿದ್ದೇವೆ. ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು.
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…