ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ.
ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 5000 ಕ್ಯೂಸೆಕ್ಸ್ಗಳಾಗಿದ್ದು, ಜಲಾಶಯದ ಹೊರಹರಿವು 2000 ಕ್ಯೂಸೆಕ್ಸ್ಗಳಿಗೆ ಇಳಿಕೆಯಾಗಿದೆ.
ಕಳೆದ ಎರಡು ದಿನಗಳಿಂದ ಬಿಸಿಲು ಇರುವುದರಿಂದ ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನದಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸ್ಥಿತಿ ಸಹಜ ಸ್ಥಿತಿಯತ್ತ ಮರಳಲಿದೆ.
ಮಳೆ ಕಡಿಮೆಯಾಗಿ ಕಬಿನಿ ಜಲಾಶಯದ ಹೊರಹರಿವಿನಲ್ಲಿ ಭಾರೀ ಇಳಿಕೆಯಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರ ಸ್ಥಿತಿ ಇನ್ನೆರಡು ದಿನದಲ್ಲಿ ಸಹಜ ಸ್ಥಿತಿಯತ್ತ ಮರಳಲಿದ್ದು, ರೈತರು ಕೂಡ ಭಾರೀ ಸಂತಸದಲ್ಲಿದ್ದಾರೆ.
ಆದರೆ ಮತ್ತೆ ಇನ್ನೆರಡು ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆ ಜಾಸ್ತಿ ಆದರೆ ಮತ್ತೆ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಲಿದೆ. ಒಳಹರಿವಿ ಹೆಚ್ಚಾದಂತೆ ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ ಎನ್ನಲಾಗಿದೆ.
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…