ಎಚ್.ಡಿ.ಕೋಟೆ: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ಗೆ ಮೊದಲ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ನೆರೆಯ ಕೇರಳದಲ್ಲಿ ನಿಫಾ ವೈರಸ್ಗೆ ಮೊದಲ ಬಲಿಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು, ಕೊಡಗು ಹಾಗೂ ಚಾಮರಾಜನಗರದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನೂ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ಪೋಸ್ಟ್ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಬರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಬಾವಲಿ ಚೆಕ್ಪೋಸ್ಟ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಮೊಕ್ಕಾಂ ಹೂಡಿದ್ದು, ಕೇರಳದಿಂದ ಬರುವ ಪ್ರತೀ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಕರ್ನಾಟಕದಿಂದ ತರಕಾರಿ ತೆಗೆದುಕೊಂಡು ಕೇರಳಕ್ಕೆ ಅಪಾರ ವಾಹನಗಳು ಹೋಗುತ್ತಿದ್ದು, ಅಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಬಾವಲಿ ಚೆಕ್ಪೋಸ್ಟ್ಗೆ ಎಚ್.ಡಿ.ಕೋಟೆ ಆರೋಗ್ಯಾಧಿಕಾರಿ ಭೇಟಿ ನೀಡಿದ್ದು, ಎಲ್ಲರೂ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಹೈಕೋರ್ಟ್ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಎಂದಿನಂತೆ…