Keralites Enter the State for Oil Extraction; Frustrated Locals Raise Their Voices
ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ.
ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ.
ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ ಕೇರಳಿಗರು ಲಗ್ಗೆ ಇಡುತ್ತಿದ್ದು, ರಾಜ್ಯದ ಗಡಿ ಭಾಗದಲ್ಲಿ ಪಾನಮತ್ತರಾಗಿ ತೂರಾಡುತ್ತಿದ್ದಾರೆ. ಮದ್ಯದ ನಶೆಯಲ್ಲಿ ಜನರು ಎಲ್ಲೆಂದರಲ್ಲಿ ಬಿದ್ದು ಒದ್ದಾಡುತ್ತಿದ್ದು, ಕಾಡು ಪ್ರಾಣಿಗಳು ಓಡಾಡುವ ಸ್ಥಳಗಳಲ್ಲೂ ಕೇರಳಿಗರು ನಶೆಯಲ್ಲಿ ತೇಲಾಡುತ್ತಿದ್ದಾರೆ.
ಕೇರಳಿಗರು ಬಾವಲಿ ಚೆಕ್ಪೋಸ್ಟ್ ಮುಖಾಂತರ ತಂಡೋಪತಂಡವಾಗಿ ಕರ್ನಾಟಕಕ್ಕೆ ಬಂದು ಮದ್ಯ ಸೇವನೆ ಮಾಡುತ್ತಿದ್ದು, ರಾಜ್ಯದ ಜನತೆಗೆ ಸಂಕಷ್ಟ ತಂದೊಡ್ಡಿದ್ದಾರೆ.
ದಟ್ಟ ಅರಣ್ಯ ನಾಗರಹೊಳೆಯ ಬಾವಲಿ ಚೆಕ್ಪೋಸ್ಟ್ ರಸ್ತೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರಗೆ ಸಂಚಾರಕ್ಕೆ ನಿಷೇಧವಿದೆ. ಆದರೆ ಈ ಭಾಗದಲ್ಲಿ ರಾತ್ರಿ 10 ಗಂಟೆಯವರೆಗೂ ಮದ್ಯದಂಗಡಿಗಳು ಮಾತ್ರ ಎಂದಿನಂತೆ ತೆರೆಯಲಿವೆ. ಅಂಗಡಿಗಳಲ್ಲಿ ಮದ್ಯ ಸೇವಿಸಿ ಕೇರಳಿಗರು ಹಾಡಿಗಳಿಗೆ ನುಗ್ಗುತ್ತಿದ್ದು, ಹಾಡಿ ಹೆಣ್ಣು ಮಕ್ಕಳಿಗೆ ಭಾರೀ ಕಿರಿಕಿರಿ ಉಂಟು ಮಾಡಿದ್ದಾರೆ.
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…
ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…
ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…