ಮೈಸೂರು

ಎಣ್ಣೆ ಹೊಡೆಯೋಕೆ ರಾಜ್ಯಕ್ಕೆ ಲಗ್ಗೆ ಇಡುವ ಕೇರಳಿಗರು: ಬೇಸತ್ತ ರಾಜ್ಯದ ಹಾಡಿ ಜನತೆ

ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ.

ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ.

ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ ಕೇರಳಿಗರು ಲಗ್ಗೆ ಇಡುತ್ತಿದ್ದು, ರಾಜ್ಯದ ಗಡಿ ಭಾಗದಲ್ಲಿ ಪಾನಮತ್ತರಾಗಿ ತೂರಾಡುತ್ತಿದ್ದಾರೆ. ಮದ್ಯದ ನಶೆಯಲ್ಲಿ ಜನರು ಎಲ್ಲೆಂದರಲ್ಲಿ ಬಿದ್ದು ಒದ್ದಾಡುತ್ತಿದ್ದು, ಕಾಡು ಪ್ರಾಣಿಗಳು ಓಡಾಡುವ ಸ್ಥಳಗಳಲ್ಲೂ ಕೇರಳಿಗರು ನಶೆಯಲ್ಲಿ ತೇಲಾಡುತ್ತಿದ್ದಾರೆ.

ಕೇರಳಿಗರು ಬಾವಲಿ ಚೆಕ್‌ಪೋಸ್ಟ್ ಮುಖಾಂತರ ತಂಡೋಪತಂಡವಾಗಿ ಕರ್ನಾಟಕಕ್ಕೆ ಬಂದು ಮದ್ಯ ಸೇವನೆ ಮಾಡುತ್ತಿದ್ದು, ರಾಜ್ಯದ ಜನತೆಗೆ ಸಂಕಷ್ಟ ತಂದೊಡ್ಡಿದ್ದಾರೆ.

ದಟ್ಟ ಅರಣ್ಯ ನಾಗರಹೊಳೆಯ ಬಾವಲಿ ಚೆಕ್‌ಪೋಸ್ಟ್ ರಸ್ತೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರಗೆ ಸಂಚಾರಕ್ಕೆ ನಿಷೇಧವಿದೆ. ಆದರೆ ಈ ಭಾಗದಲ್ಲಿ ರಾತ್ರಿ 10 ಗಂಟೆಯವರೆಗೂ ಮದ್ಯದಂಗಡಿಗಳು ಮಾತ್ರ ಎಂದಿನಂತೆ ತೆರೆಯಲಿವೆ. ಅಂಗಡಿಗಳಲ್ಲಿ ಮದ್ಯ ಸೇವಿಸಿ ಕೇರಳಿಗರು ಹಾಡಿಗಳಿಗೆ ನುಗ್ಗುತ್ತಿದ್ದು, ಹಾಡಿ ಹೆಣ್ಣು ಮಕ್ಕಳಿಗೆ ಭಾರೀ ಕಿರಿಕಿರಿ ಉಂಟು ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

3 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

5 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

6 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

6 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

6 hours ago