Keralites Enter the State for Oil Extraction; Frustrated Locals Raise Their Voices
ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ.
ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ.
ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ ಕೇರಳಿಗರು ಲಗ್ಗೆ ಇಡುತ್ತಿದ್ದು, ರಾಜ್ಯದ ಗಡಿ ಭಾಗದಲ್ಲಿ ಪಾನಮತ್ತರಾಗಿ ತೂರಾಡುತ್ತಿದ್ದಾರೆ. ಮದ್ಯದ ನಶೆಯಲ್ಲಿ ಜನರು ಎಲ್ಲೆಂದರಲ್ಲಿ ಬಿದ್ದು ಒದ್ದಾಡುತ್ತಿದ್ದು, ಕಾಡು ಪ್ರಾಣಿಗಳು ಓಡಾಡುವ ಸ್ಥಳಗಳಲ್ಲೂ ಕೇರಳಿಗರು ನಶೆಯಲ್ಲಿ ತೇಲಾಡುತ್ತಿದ್ದಾರೆ.
ಕೇರಳಿಗರು ಬಾವಲಿ ಚೆಕ್ಪೋಸ್ಟ್ ಮುಖಾಂತರ ತಂಡೋಪತಂಡವಾಗಿ ಕರ್ನಾಟಕಕ್ಕೆ ಬಂದು ಮದ್ಯ ಸೇವನೆ ಮಾಡುತ್ತಿದ್ದು, ರಾಜ್ಯದ ಜನತೆಗೆ ಸಂಕಷ್ಟ ತಂದೊಡ್ಡಿದ್ದಾರೆ.
ದಟ್ಟ ಅರಣ್ಯ ನಾಗರಹೊಳೆಯ ಬಾವಲಿ ಚೆಕ್ಪೋಸ್ಟ್ ರಸ್ತೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರಗೆ ಸಂಚಾರಕ್ಕೆ ನಿಷೇಧವಿದೆ. ಆದರೆ ಈ ಭಾಗದಲ್ಲಿ ರಾತ್ರಿ 10 ಗಂಟೆಯವರೆಗೂ ಮದ್ಯದಂಗಡಿಗಳು ಮಾತ್ರ ಎಂದಿನಂತೆ ತೆರೆಯಲಿವೆ. ಅಂಗಡಿಗಳಲ್ಲಿ ಮದ್ಯ ಸೇವಿಸಿ ಕೇರಳಿಗರು ಹಾಡಿಗಳಿಗೆ ನುಗ್ಗುತ್ತಿದ್ದು, ಹಾಡಿ ಹೆಣ್ಣು ಮಕ್ಕಳಿಗೆ ಭಾರೀ ಕಿರಿಕಿರಿ ಉಂಟು ಮಾಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…