Keralites Enter the State for Oil Extraction; Frustrated Locals Raise Their Voices
ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ.
ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ.
ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ ಕೇರಳಿಗರು ಲಗ್ಗೆ ಇಡುತ್ತಿದ್ದು, ರಾಜ್ಯದ ಗಡಿ ಭಾಗದಲ್ಲಿ ಪಾನಮತ್ತರಾಗಿ ತೂರಾಡುತ್ತಿದ್ದಾರೆ. ಮದ್ಯದ ನಶೆಯಲ್ಲಿ ಜನರು ಎಲ್ಲೆಂದರಲ್ಲಿ ಬಿದ್ದು ಒದ್ದಾಡುತ್ತಿದ್ದು, ಕಾಡು ಪ್ರಾಣಿಗಳು ಓಡಾಡುವ ಸ್ಥಳಗಳಲ್ಲೂ ಕೇರಳಿಗರು ನಶೆಯಲ್ಲಿ ತೇಲಾಡುತ್ತಿದ್ದಾರೆ.
ಕೇರಳಿಗರು ಬಾವಲಿ ಚೆಕ್ಪೋಸ್ಟ್ ಮುಖಾಂತರ ತಂಡೋಪತಂಡವಾಗಿ ಕರ್ನಾಟಕಕ್ಕೆ ಬಂದು ಮದ್ಯ ಸೇವನೆ ಮಾಡುತ್ತಿದ್ದು, ರಾಜ್ಯದ ಜನತೆಗೆ ಸಂಕಷ್ಟ ತಂದೊಡ್ಡಿದ್ದಾರೆ.
ದಟ್ಟ ಅರಣ್ಯ ನಾಗರಹೊಳೆಯ ಬಾವಲಿ ಚೆಕ್ಪೋಸ್ಟ್ ರಸ್ತೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರಗೆ ಸಂಚಾರಕ್ಕೆ ನಿಷೇಧವಿದೆ. ಆದರೆ ಈ ಭಾಗದಲ್ಲಿ ರಾತ್ರಿ 10 ಗಂಟೆಯವರೆಗೂ ಮದ್ಯದಂಗಡಿಗಳು ಮಾತ್ರ ಎಂದಿನಂತೆ ತೆರೆಯಲಿವೆ. ಅಂಗಡಿಗಳಲ್ಲಿ ಮದ್ಯ ಸೇವಿಸಿ ಕೇರಳಿಗರು ಹಾಡಿಗಳಿಗೆ ನುಗ್ಗುತ್ತಿದ್ದು, ಹಾಡಿ ಹೆಣ್ಣು ಮಕ್ಕಳಿಗೆ ಭಾರೀ ಕಿರಿಕಿರಿ ಉಂಟು ಮಾಡಿದ್ದಾರೆ.
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…