ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಚಿನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ.
ಚಿನ್ನ ತೆಗೆದುಕೊಂಡು ಹೋಗಲು ಮೊದಲೇ ಎರಡು ಚೀಲವನ್ನು ತಂದಿದ್ದ ದರೋಡೆಕೋರರು, ಶೋಕೆಸ್ನಲ್ಲಿದ್ದ ದೊಡ್ಡ ದೊಡ್ಡ ಗಾತ್ರದ ಚಿನ್ನಾಭರಣವನ್ನು ಒಂದು ಕಡೆ ಗುಡ್ಡೆ ಹಾಕಿದ್ದರು.
ಒಬ್ಬ ಚಿನ್ನ ಗುಡ್ಡೆ ಹಾಕುತ್ತಿದ್ದ, ಮತ್ತೊಬ್ಬ ಗನ್ ಹಿಡಿದು ಸಿಬ್ಬಂದಿಯನ್ನು ಬೆದರಿಸುತ್ತಿದ್ದ, ಇನ್ನೊಬ್ಬ ಬಾಗಿಲ ಬಳಿ ನಿಂತಿದ್ದ. ಉಳಿದ ಇಬ್ಬರು ಹೊರಗಡೆ ದ್ವಿಚಕರ ವಾಹನ ಸ್ಟಾರ್ಟ್ ಮಾಡಿಕೊಂಡು ನಿಂತಿದ್ದರು.
ದರೋಡೆಯ ದೃಶ್ಯ ಶಾಪ್ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂದು ಬೈಕ್ನಲ್ಲಿ ಇಬ್ಬರು, ಮತ್ತೊಂದು ಬೈಕ್ನಲ್ಲಿ ಮೂವರು ಹುಣಸೂರಿನಿಂದ ಕೆ.ಆರ್.ನಗರಕ್ಕೆ ಬೈಪಾಸ್ ರಸ್ತೆಯ ಮೂಲಕ ಹೋಗುತ್ತಿರುವ ವಿಡಿಯೋ ಸೆರೆಯಾಗಿದೆ.
ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…