ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಚಿನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ.
ಚಿನ್ನ ತೆಗೆದುಕೊಂಡು ಹೋಗಲು ಮೊದಲೇ ಎರಡು ಚೀಲವನ್ನು ತಂದಿದ್ದ ದರೋಡೆಕೋರರು, ಶೋಕೆಸ್ನಲ್ಲಿದ್ದ ದೊಡ್ಡ ದೊಡ್ಡ ಗಾತ್ರದ ಚಿನ್ನಾಭರಣವನ್ನು ಒಂದು ಕಡೆ ಗುಡ್ಡೆ ಹಾಕಿದ್ದರು.
ಒಬ್ಬ ಚಿನ್ನ ಗುಡ್ಡೆ ಹಾಕುತ್ತಿದ್ದ, ಮತ್ತೊಬ್ಬ ಗನ್ ಹಿಡಿದು ಸಿಬ್ಬಂದಿಯನ್ನು ಬೆದರಿಸುತ್ತಿದ್ದ, ಇನ್ನೊಬ್ಬ ಬಾಗಿಲ ಬಳಿ ನಿಂತಿದ್ದ. ಉಳಿದ ಇಬ್ಬರು ಹೊರಗಡೆ ದ್ವಿಚಕರ ವಾಹನ ಸ್ಟಾರ್ಟ್ ಮಾಡಿಕೊಂಡು ನಿಂತಿದ್ದರು.
ದರೋಡೆಯ ದೃಶ್ಯ ಶಾಪ್ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂದು ಬೈಕ್ನಲ್ಲಿ ಇಬ್ಬರು, ಮತ್ತೊಂದು ಬೈಕ್ನಲ್ಲಿ ಮೂವರು ಹುಣಸೂರಿನಿಂದ ಕೆ.ಆರ್.ನಗರಕ್ಕೆ ಬೈಪಾಸ್ ರಸ್ತೆಯ ಮೂಲಕ ಹೋಗುತ್ತಿರುವ ವಿಡಿಯೋ ಸೆರೆಯಾಗಿದೆ.
ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆ ಮುಂದುವರಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…