ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ದರೋಡೆಕೋರರು 7 ಗನ್ ಬಳಸಿ, ಕೇವಲ 4 ನಿಮಿಷದಲ್ಲೇ ಕೆಜಿಗಟ್ಟಲೇ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ 2 ಗಂಟೆ 4 ನಿಮಿಷಕ್ಕೆ ಚಿನ್ನದ ಅಂಗಡಿಗೆ ನುಗ್ಗಿದ್ದ ದರೋಡೆಕೋರರು 2 ಗಂಟೆ 8 ನಿಮಿಷಕ್ಕೆ ಪರಾರಿಯಾಗಿದ್ದಾರೆ.
ಚಿನ್ನ ತೆಗೆದುಕೊಂಡು ಹೋಗಲು ಮೊದಲೇ ಎರಡು ಚೀಲವನ್ನು ತಂದಿದ್ದ ದರೋಡೆಕೋರರು, ಶೋಕೆಸ್ನಲ್ಲಿದ್ದ ದೊಡ್ಡ ದೊಡ್ಡ ಗಾತ್ರದ ಚಿನ್ನಾಭರಣವನ್ನು ಒಂದು ಕಡೆ ಗುಡ್ಡೆ ಹಾಕಿದ್ದರು.
ಒಬ್ಬ ಚಿನ್ನ ಗುಡ್ಡೆ ಹಾಕುತ್ತಿದ್ದ, ಮತ್ತೊಬ್ಬ ಗನ್ ಹಿಡಿದು ಸಿಬ್ಬಂದಿಯನ್ನು ಬೆದರಿಸುತ್ತಿದ್ದ, ಇನ್ನೊಬ್ಬ ಬಾಗಿಲ ಬಳಿ ನಿಂತಿದ್ದ. ಉಳಿದ ಇಬ್ಬರು ಹೊರಗಡೆ ದ್ವಿಚಕರ ವಾಹನ ಸ್ಟಾರ್ಟ್ ಮಾಡಿಕೊಂಡು ನಿಂತಿದ್ದರು.
ದರೋಡೆಯ ದೃಶ್ಯ ಶಾಪ್ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂದು ಬೈಕ್ನಲ್ಲಿ ಇಬ್ಬರು, ಮತ್ತೊಂದು ಬೈಕ್ನಲ್ಲಿ ಮೂವರು ಹುಣಸೂರಿನಿಂದ ಕೆ.ಆರ್.ನಗರಕ್ಕೆ ಬೈಪಾಸ್ ರಸ್ತೆಯ ಮೂಲಕ ಹೋಗುತ್ತಿರುವ ವಿಡಿಯೋ ಸೆರೆಯಾಗಿದೆ.
ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…