ಮೈಸೂರು

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ ಬದಲಿಸಿ ಬಿಡುತ್ತೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಂತಿದೆ. ‌

ಎಂಬಿಬಿಎಸ್ ಓದಿ ವೈದ್ಯೆಯಾಗಿದ್ದ ಡಾ. ನಾಗಶ್ರೀ ಸಾವಿರಾರು ಜನರ ಕಷ್ಟಕ್ಕೆ ಸ್ಪಂದಿಸುವ ಕನಸು ಕಂಡಿದ್ದಳು. ಆದ್ರೆ ಜ್ಯೂನಿಯರ್ ವೈದ್ಯನ ಜೊತೆ ಪ್ರೇಮ ಪಾಶಕ್ಕೆ ಬಿದ್ದು 12 ವರ್ಷ ಜೀವಂತ ಶವವಾಗಿದ್ದಳು, ಇದೀಗ ಉಸಿರುಚೆಲ್ಲಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಡಾ. ನಾಗಶ್ರೀ ಆಯುರ್ವೇದ ವಿಭಾಗದಲ್ಲಿ ಪ್ರ್ಯಾಕ್ಟೀಸ್ ಮಾಡ್ತಿದ್ದರು. ಇದೇ ವೇಳೆ ಜೂನಿಯರ್ ವೈದ್ಯ ಡಾ. ವಿನಯ್ ಕುಮಾರ್ ಪರಿಚಯವಾಗಿದ್ದರು. ಡಾ. ನಾಗಶ್ರೀ ಜೊತೆಗೆ ಸಲುಗೆ ಪ್ರೀತಿ ನಾಟಕವಾಡಿ, ಬಳಿಕ ವಯಸ್ಸಿನಲ್ಲಿ ದೊಡ್ಡವಳು ಮನೆಯಲ್ಲಿ ಒಪ್ಪಲ್ಲ ಅಂತಾ ನಾಟಕವಾಡಿದ್ದಾನೆ. ಬಳಿಕ ಶ್ರೀರಂಗಪಟ್ಟಣ ಲಾಡ್ಜ್ ಗೆ ಕರೆದೊಯ್ದು ಸಾಯೋ ನಾಟಕವಾಡಿ, ಡಾ.ನಾಗಶ್ರೀಗೆ ನಿದ್ರೆ ಮಾತ್ರೆ ಹಾಗೂ ಓವರ್ ಡೋಸ್ ಇಂಜೆಕ್ಷನ್ ನೀಡಿದ್ದಾನೆ. ಈ ವೇಳೆ ತಾನೂ ಕೂಡ ಆತ್ಮಹತ್ಯೆ ಪ್ರಯತ್ನದ ನಾಟಕವಾಡಿ, ಬಳಿಕ ಘಟನೆಯಿಂದ ವೈದ್ಯೆ ಕೋಮಕ್ಕೆ ಜಾರಿದ್ದರು. ಒಂದೇ ದಿನದಲ್ಲಿ ಈತ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಆದರೆ, ಕೋಮದಿಂದ ಹೊರಬಂದು 12 ವರ್ಷಗಳ ಕಾಲ ಜೀವಂತ ಶವವಾಗಿದ್ದ ನಾಗಶ್ರೀ ನಿನ್ನೆ ನಿಧನ ಹೊಂದಿದ್ದಾರೆ.

ಡಾ. ವಿನಯ್ ಕುಮಾರ್ ನಿಂದ ಈ ಹಿಂದೆ ಪ್ರಾಣ ಕಳೆದುಕೊಂಡಿದ್ದ ಚಾರ್ಟೆಡ್ ಅಕೌಂಟೆಡ್ ಗೌತಮಿ ಹಿರೇಮಠ ಪ್ರಕರಣ ಕೋರ್ಟ್‌ನಲ್ಲಿದ್ದು, ಸದ್ಯ ಬಿ.ರಿಪೋರ್ಟ್ ಸಲ್ಲಿಕೆಯಾಗಿದೆ. ಇವೆಲ್ಲಾ ಆದ ಬಳಿಕ ಆರೋಪಿ ಜೂನಿಯರ್‌ ವೈದ್ಯ ವಿನಯ್‌ ಕುಮಾರ್‌, ವಿನೋದಾ ಎಂಬಾಕೆ ಜೊತೆ ಮದುವೆಯಾದರು. ಇಲ್ಲಿಯೂ ಸಹ ಆತನ ಕಿರುಕುಳ ತಾಳಲಾರದೆ ಪತ್ನಿ ವಿನೋದ ಆತನನ್ನು ಬಿಟ್ಟರು. ಹುಣಸೂರು ತಾಲ್ಲೂಕಿನ ಹನಗೂಡಿನಲ್ಲಿ ವೈದ್ಯ ವಿನಯ್ ಕುಮಾರ್ ಕ್ಲಿನಿಕ್ ನಡೆಸುತ್ತಿದ್ದರು. ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲು ವಕೀಲ ಪಾಂಡು ಪೂಜಾರಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

6 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago