ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ ಬದಲಿಸಿ ಬಿಡುತ್ತೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿಯಂತಿದೆ.
ಎಂಬಿಬಿಎಸ್ ಓದಿ ವೈದ್ಯೆಯಾಗಿದ್ದ ಡಾ. ನಾಗಶ್ರೀ ಸಾವಿರಾರು ಜನರ ಕಷ್ಟಕ್ಕೆ ಸ್ಪಂದಿಸುವ ಕನಸು ಕಂಡಿದ್ದಳು. ಆದ್ರೆ ಜ್ಯೂನಿಯರ್ ವೈದ್ಯನ ಜೊತೆ ಪ್ರೇಮ ಪಾಶಕ್ಕೆ ಬಿದ್ದು 12 ವರ್ಷ ಜೀವಂತ ಶವವಾಗಿದ್ದಳು, ಇದೀಗ ಉಸಿರುಚೆಲ್ಲಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಡಾ. ನಾಗಶ್ರೀ ಆಯುರ್ವೇದ ವಿಭಾಗದಲ್ಲಿ ಪ್ರ್ಯಾಕ್ಟೀಸ್ ಮಾಡ್ತಿದ್ದರು. ಇದೇ ವೇಳೆ ಜೂನಿಯರ್ ವೈದ್ಯ ಡಾ. ವಿನಯ್ ಕುಮಾರ್ ಪರಿಚಯವಾಗಿದ್ದರು. ಡಾ. ನಾಗಶ್ರೀ ಜೊತೆಗೆ ಸಲುಗೆ ಪ್ರೀತಿ ನಾಟಕವಾಡಿ, ಬಳಿಕ ವಯಸ್ಸಿನಲ್ಲಿ ದೊಡ್ಡವಳು ಮನೆಯಲ್ಲಿ ಒಪ್ಪಲ್ಲ ಅಂತಾ ನಾಟಕವಾಡಿದ್ದಾನೆ. ಬಳಿಕ ಶ್ರೀರಂಗಪಟ್ಟಣ ಲಾಡ್ಜ್ ಗೆ ಕರೆದೊಯ್ದು ಸಾಯೋ ನಾಟಕವಾಡಿ, ಡಾ.ನಾಗಶ್ರೀಗೆ ನಿದ್ರೆ ಮಾತ್ರೆ ಹಾಗೂ ಓವರ್ ಡೋಸ್ ಇಂಜೆಕ್ಷನ್ ನೀಡಿದ್ದಾನೆ. ಈ ವೇಳೆ ತಾನೂ ಕೂಡ ಆತ್ಮಹತ್ಯೆ ಪ್ರಯತ್ನದ ನಾಟಕವಾಡಿ, ಬಳಿಕ ಘಟನೆಯಿಂದ ವೈದ್ಯೆ ಕೋಮಕ್ಕೆ ಜಾರಿದ್ದರು. ಒಂದೇ ದಿನದಲ್ಲಿ ಈತ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಆದರೆ, ಕೋಮದಿಂದ ಹೊರಬಂದು 12 ವರ್ಷಗಳ ಕಾಲ ಜೀವಂತ ಶವವಾಗಿದ್ದ ನಾಗಶ್ರೀ ನಿನ್ನೆ ನಿಧನ ಹೊಂದಿದ್ದಾರೆ.
ಡಾ. ವಿನಯ್ ಕುಮಾರ್ ನಿಂದ ಈ ಹಿಂದೆ ಪ್ರಾಣ ಕಳೆದುಕೊಂಡಿದ್ದ ಚಾರ್ಟೆಡ್ ಅಕೌಂಟೆಡ್ ಗೌತಮಿ ಹಿರೇಮಠ ಪ್ರಕರಣ ಕೋರ್ಟ್ನಲ್ಲಿದ್ದು, ಸದ್ಯ ಬಿ.ರಿಪೋರ್ಟ್ ಸಲ್ಲಿಕೆಯಾಗಿದೆ. ಇವೆಲ್ಲಾ ಆದ ಬಳಿಕ ಆರೋಪಿ ಜೂನಿಯರ್ ವೈದ್ಯ ವಿನಯ್ ಕುಮಾರ್, ವಿನೋದಾ ಎಂಬಾಕೆ ಜೊತೆ ಮದುವೆಯಾದರು. ಇಲ್ಲಿಯೂ ಸಹ ಆತನ ಕಿರುಕುಳ ತಾಳಲಾರದೆ ಪತ್ನಿ ವಿನೋದ ಆತನನ್ನು ಬಿಟ್ಟರು. ಹುಣಸೂರು ತಾಲ್ಲೂಕಿನ ಹನಗೂಡಿನಲ್ಲಿ ವೈದ್ಯ ವಿನಯ್ ಕುಮಾರ್ ಕ್ಲಿನಿಕ್ ನಡೆಸುತ್ತಿದ್ದರು. ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲು ವಕೀಲ ಪಾಂಡು ಪೂಜಾರಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…