ಮೈಸೂರು

ಯುವ ಬ್ರಿಗೇಡ್‌ ಕಾರ್ಯಕರ್ತನ ಕೊಲೆಯನ್ನು ಧರ್ಮಾಧಾರಿತ ಬೆಂಬಲ ಪಡೆಯಲು ಬಳಸಿಕೊಳ್ಳುತ್ತಿದ್ದಾರೆ : ದಸಂಸ

ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.

ವೇಣುಗೋಪಾಲ್‌ ಕೊಲೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ವೈಯಕ್ತಿಕ ದ್ವೇಷದಿಂದ ಮತ್ತು ಸ್ವ ಪ್ರತಿಷ್ಠೆಯಿಂದ ಘಟನೆ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವಿಚಾರವಾಗಿ ತಾಲೂಕಿಗೆ ಭೇಟಿ ನೀಡಿದ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ, ಅಶ್ವತ್‌ ನಾರಾಯಣ, ಎನ್‌. ಮಹೇಶ ಅವರು ಈ ಕೊಲೆಯನ್ನು ಹಿಂದು ಕಾರ್ಯಕರ್ತನ ಕೊಲೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯುವಕರಲ್ಲಿ ವಿಷ ಬೀಜ ಬಿತ್ತಿ ಮುಂಬರುವ ಚುನಾವಣೆಯಲ್ಲಿ ಧರ್ಮಾಧಾರಿತ ಬೆಂಬಲ ಪಡೆಯಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿ ಎಂದು ಅವರು ಆರೋಪಿಸಿದರು.

ಹನುಮ ಜಯಂತಿಗೆ ಅನುಮತಿ ನೀಡಿದ್ದರಿಂದ ಈ ರೀತಿ ಸಮಸ್ಯೆ ಸೃಷ್ಟಿಯಾಗಿದೆ ನಮ್ಮ ತಾಲೂಕಿಗೆ ಹನುಮ ಜಯಂತಿಯ ಅವಶ್ಯಕತೆ ಇಲ್ಲ, ನೂರಾರು ವರ್ಷಗಳಿಂದ ಧಾರ್ಮಿಕ ಜಾತ್ರೆಗಳು ನಡೆಯುತ್ತಿರುವುದರಿಂದ ಹೊಸದಾಗಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರ ಹನುಮ ಜಯಂತಿಗೆ ಅನುಮತಿ ನೀಡಬಾರದು, ಬಿಜೆಪಿಯ ಯಾವುದೇ ನಾಯಕರಿಗೆ ತಾಲೂಕು ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ವೇಣುಗೋಪಾಲ್‌ ಕುಟುಂಬಕ್ಕೆ ಸರ್ಕಾರ ಆರ್ಥಿಕ ಸಹಕಾರ ನೀಡಬೇಕು ಎಂದು ಅವರು ಅಗ್ರಹಿಸಿದರು. ಶಿವಣ್ಣ, ಎಸ್‌. ನಂಜುಂಡಯ್ಯ, ಮಹದೇವಸ್ವಾಮಿ, ಮಂಜು, ನಾಗರಾಜು ಇದ್ದರು.

lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

2 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

2 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

3 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago