ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್.ಆರ್. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.
ವೇಣುಗೋಪಾಲ್ ಕೊಲೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ವೈಯಕ್ತಿಕ ದ್ವೇಷದಿಂದ ಮತ್ತು ಸ್ವ ಪ್ರತಿಷ್ಠೆಯಿಂದ ಘಟನೆ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವಿಚಾರವಾಗಿ ತಾಲೂಕಿಗೆ ಭೇಟಿ ನೀಡಿದ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ, ಅಶ್ವತ್ ನಾರಾಯಣ, ಎನ್. ಮಹೇಶ ಅವರು ಈ ಕೊಲೆಯನ್ನು ಹಿಂದು ಕಾರ್ಯಕರ್ತನ ಕೊಲೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯುವಕರಲ್ಲಿ ವಿಷ ಬೀಜ ಬಿತ್ತಿ ಮುಂಬರುವ ಚುನಾವಣೆಯಲ್ಲಿ ಧರ್ಮಾಧಾರಿತ ಬೆಂಬಲ ಪಡೆಯಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿ ಎಂದು ಅವರು ಆರೋಪಿಸಿದರು.
ಹನುಮ ಜಯಂತಿಗೆ ಅನುಮತಿ ನೀಡಿದ್ದರಿಂದ ಈ ರೀತಿ ಸಮಸ್ಯೆ ಸೃಷ್ಟಿಯಾಗಿದೆ ನಮ್ಮ ತಾಲೂಕಿಗೆ ಹನುಮ ಜಯಂತಿಯ ಅವಶ್ಯಕತೆ ಇಲ್ಲ, ನೂರಾರು ವರ್ಷಗಳಿಂದ ಧಾರ್ಮಿಕ ಜಾತ್ರೆಗಳು ನಡೆಯುತ್ತಿರುವುದರಿಂದ ಹೊಸದಾಗಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರ ಹನುಮ ಜಯಂತಿಗೆ ಅನುಮತಿ ನೀಡಬಾರದು, ಬಿಜೆಪಿಯ ಯಾವುದೇ ನಾಯಕರಿಗೆ ತಾಲೂಕು ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ವೇಣುಗೋಪಾಲ್ ಕುಟುಂಬಕ್ಕೆ ಸರ್ಕಾರ ಆರ್ಥಿಕ ಸಹಕಾರ ನೀಡಬೇಕು ಎಂದು ಅವರು ಅಗ್ರಹಿಸಿದರು. ಶಿವಣ್ಣ, ಎಸ್. ನಂಜುಂಡಯ್ಯ, ಮಹದೇವಸ್ವಾಮಿ, ಮಂಜು, ನಾಗರಾಜು ಇದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…