ಮೈಸೂರು

ಯುವ ಬ್ರಿಗೇಡ್‌ ಕಾರ್ಯಕರ್ತನ ಕೊಲೆಯನ್ನು ಧರ್ಮಾಧಾರಿತ ಬೆಂಬಲ ಪಡೆಯಲು ಬಳಸಿಕೊಳ್ಳುತ್ತಿದ್ದಾರೆ : ದಸಂಸ

ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.

ವೇಣುಗೋಪಾಲ್‌ ಕೊಲೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ವೈಯಕ್ತಿಕ ದ್ವೇಷದಿಂದ ಮತ್ತು ಸ್ವ ಪ್ರತಿಷ್ಠೆಯಿಂದ ಘಟನೆ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವಿಚಾರವಾಗಿ ತಾಲೂಕಿಗೆ ಭೇಟಿ ನೀಡಿದ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ, ಅಶ್ವತ್‌ ನಾರಾಯಣ, ಎನ್‌. ಮಹೇಶ ಅವರು ಈ ಕೊಲೆಯನ್ನು ಹಿಂದು ಕಾರ್ಯಕರ್ತನ ಕೊಲೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯುವಕರಲ್ಲಿ ವಿಷ ಬೀಜ ಬಿತ್ತಿ ಮುಂಬರುವ ಚುನಾವಣೆಯಲ್ಲಿ ಧರ್ಮಾಧಾರಿತ ಬೆಂಬಲ ಪಡೆಯಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿ ಎಂದು ಅವರು ಆರೋಪಿಸಿದರು.

ಹನುಮ ಜಯಂತಿಗೆ ಅನುಮತಿ ನೀಡಿದ್ದರಿಂದ ಈ ರೀತಿ ಸಮಸ್ಯೆ ಸೃಷ್ಟಿಯಾಗಿದೆ ನಮ್ಮ ತಾಲೂಕಿಗೆ ಹನುಮ ಜಯಂತಿಯ ಅವಶ್ಯಕತೆ ಇಲ್ಲ, ನೂರಾರು ವರ್ಷಗಳಿಂದ ಧಾರ್ಮಿಕ ಜಾತ್ರೆಗಳು ನಡೆಯುತ್ತಿರುವುದರಿಂದ ಹೊಸದಾಗಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರ ಹನುಮ ಜಯಂತಿಗೆ ಅನುಮತಿ ನೀಡಬಾರದು, ಬಿಜೆಪಿಯ ಯಾವುದೇ ನಾಯಕರಿಗೆ ತಾಲೂಕು ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ವೇಣುಗೋಪಾಲ್‌ ಕುಟುಂಬಕ್ಕೆ ಸರ್ಕಾರ ಆರ್ಥಿಕ ಸಹಕಾರ ನೀಡಬೇಕು ಎಂದು ಅವರು ಅಗ್ರಹಿಸಿದರು. ಶಿವಣ್ಣ, ಎಸ್‌. ನಂಜುಂಡಯ್ಯ, ಮಹದೇವಸ್ವಾಮಿ, ಮಂಜು, ನಾಗರಾಜು ಇದ್ದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago