ಮೈಸೂರು

ಯುವ ಬ್ರಿಗೇಡ್‌ ಕಾರ್ಯಕರ್ತನ ಕೊಲೆಯನ್ನು ಧರ್ಮಾಧಾರಿತ ಬೆಂಬಲ ಪಡೆಯಲು ಬಳಸಿಕೊಳ್ಳುತ್ತಿದ್ದಾರೆ : ದಸಂಸ

ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.

ವೇಣುಗೋಪಾಲ್‌ ಕೊಲೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ವೈಯಕ್ತಿಕ ದ್ವೇಷದಿಂದ ಮತ್ತು ಸ್ವ ಪ್ರತಿಷ್ಠೆಯಿಂದ ಘಟನೆ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವಿಚಾರವಾಗಿ ತಾಲೂಕಿಗೆ ಭೇಟಿ ನೀಡಿದ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ, ಅಶ್ವತ್‌ ನಾರಾಯಣ, ಎನ್‌. ಮಹೇಶ ಅವರು ಈ ಕೊಲೆಯನ್ನು ಹಿಂದು ಕಾರ್ಯಕರ್ತನ ಕೊಲೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯುವಕರಲ್ಲಿ ವಿಷ ಬೀಜ ಬಿತ್ತಿ ಮುಂಬರುವ ಚುನಾವಣೆಯಲ್ಲಿ ಧರ್ಮಾಧಾರಿತ ಬೆಂಬಲ ಪಡೆಯಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿ ಎಂದು ಅವರು ಆರೋಪಿಸಿದರು.

ಹನುಮ ಜಯಂತಿಗೆ ಅನುಮತಿ ನೀಡಿದ್ದರಿಂದ ಈ ರೀತಿ ಸಮಸ್ಯೆ ಸೃಷ್ಟಿಯಾಗಿದೆ ನಮ್ಮ ತಾಲೂಕಿಗೆ ಹನುಮ ಜಯಂತಿಯ ಅವಶ್ಯಕತೆ ಇಲ್ಲ, ನೂರಾರು ವರ್ಷಗಳಿಂದ ಧಾರ್ಮಿಕ ಜಾತ್ರೆಗಳು ನಡೆಯುತ್ತಿರುವುದರಿಂದ ಹೊಸದಾಗಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರ ಹನುಮ ಜಯಂತಿಗೆ ಅನುಮತಿ ನೀಡಬಾರದು, ಬಿಜೆಪಿಯ ಯಾವುದೇ ನಾಯಕರಿಗೆ ತಾಲೂಕು ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ವೇಣುಗೋಪಾಲ್‌ ಕುಟುಂಬಕ್ಕೆ ಸರ್ಕಾರ ಆರ್ಥಿಕ ಸಹಕಾರ ನೀಡಬೇಕು ಎಂದು ಅವರು ಅಗ್ರಹಿಸಿದರು. ಶಿವಣ್ಣ, ಎಸ್‌. ನಂಜುಂಡಯ್ಯ, ಮಹದೇವಸ್ವಾಮಿ, ಮಂಜು, ನಾಗರಾಜು ಇದ್ದರು.

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago