ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಣಿ ಚೆನ್ನಮ್ಮ ದೇಶದ ಜನರ ಮನಸು ಗೆದ್ದಂತಹ ಅಪ್ರತಿಮ ಹೋರಾಟಗಾರ್ತಿ. ಇತಿಹಾಸದಲ್ಲಿಯೇ ಮಹಿಳೆಯರಲ್ಲಿ ಮಂಚೂಣಿಯಲ್ಲಿರುವ ಹೆಸರು ಇವರದು. ಚೆನ್ನಮ್ಮ ಅವರು ಬ್ರಿಟಿಷರಿಗೆ ‘ನಿಮಗೇಕೆ ಕೊಡಬೇಕು ಕಪ್ಪ’ ಎಂಬ ಸವಾಲಿನ ಮಾತನ್ನಾಡಿ ನಮ್ಮ ನಾಡಿನ ಮಹಿಳೆ ಹಾಗೂ ಪುರುಷರಲ್ಲಿ ದೇಶ ಭಕ್ತಿಯನ್ನು ಹಚ್ಚಿ, 128 ವರ್ಷಗಳ ಮುಂಚೆಯೇ ಸ್ವಾತಂತ್ರ್ಯದ ಕಿಚ್ಚನ್ನು ಬೆಳಗಿಸಿದವರು ಎಂದು ಹೇಳಿದರು.
ಯಾವುದೇ ಒಂದು ಕೆಲಸ ಅಥವಾ ಸವಾಲನ್ನು ತೆಗೆದುಕೊಳ್ಳುವಾಗ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಕೊಡುವಂತಹ ಶಕ್ತಿ ಈಕೆಯದ್ದು. ಬುದ್ಧ, ಬಸವವಣ್ಣನವರ ಹಾದಿಯಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ಆರಿಸುವಲ್ಲಿ ಇವರ ಕೊಡುಗೆ ಅಪಾರ ಎಂದು ತಿಳಿಸಿದರು.
ವಿಧಾನ ಪರಿಷತ್ತಿನ ಶಾಸಕ ಸಿ.ಎನ್ ಮಂಜೇಗೌಡ ಮಾತನಾಡಿ, ನಾಡಿನ ಇತಿಹಾಸ ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಬಸವಣ್ಣ ಇವರೆಲ್ಲರೂ ತಮ್ಮ ಪ್ರಾಣವನ್ನು ದೇಶದ ಏಳಿಗೆಗೆ, ಸ್ವಾತಂತ್ರ್ಯ ಹಾಗೂ ನಾಡಿನ ರಕ್ಷಣೆಗಾಗಿ ಬಲಿದಾನ ಮಾಡಿದಂತಹ ಮಹಾನ್ ವ್ಯಕ್ತಿಗಳು. ಇಂತಹ ಮಹಾನ್ ದಾರ್ಶನಿಕರನ್ನು ನಾವು ಸ್ಮರಿಸಿಕೊಳ್ಳುವ ಮೂಲಕ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಹಿರಿಯ ಸಾಹಿತಿ ಡಾ. ಪ್ರದೀಪ್ ಕುಮಾರ್ ಹೆಬ್ರಿ ಮಾತನಾಡಿ, ನಾವೆಷ್ಟು ನಮ್ಮ ದೇಶ, ಭಾಷೆಯ ಬಗ್ಗೆ ಪ್ರಾಮಾಣಿಕತೆ ಹಾಗೂ ಛಲವನ್ನು ಅಳವಡಿಸಿಕೊಂಡಿದ್ದೇವೆ ಎಂಬ ಚಿಂತೆಯು ಕಿತ್ತೂರು ರಾಣಿ ಚೆನ್ನಮ್ಮನ ವಿಜಯೋತ್ಸವದ ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕು. ಈ ನಾಡು ಅನ್ಯರ ಪಾಲಾಗದೆ ನಮಗೇ ಉಳಿಯಬೇಕೆಂಬ ದಿಟ್ಟ ಕನಸನ್ನು ಇಟ್ಟುಕೊಂಡು ಹೋರಾಟ ನಡೆಸಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಈಕೆಯ ಬದುಕು, ಹೋರಾಟ ಅನನ್ಯ. ಅವರ ದೇಶಪ್ರೇಮ ಎಲ್ಲರಿಗೂ ಅನುಕರಣೀಯವಾಗಿದ್ದು ಎಂದರು.
ನಾಡಿನ ಜನರನ್ನು ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಹುರಿದುಂಬಿಸಿ, ಕನ್ನಡಿಗರ ಪೌರುಷ, ಸಾಹಸ, ಸ್ವಾಭಿಮಾನವನ್ನು ಹೋರಾಟದ ಮೂಲಕ ತೋರ್ಪಡಿಸಿ, ಕನ್ನಡ ನಾಡಿನ ಉಳಿವಿಗೆ ಪ್ರಾಣವನ್ನೇ ಒತ್ತೆ ಇಟ್ಟ ಧೀರ ಮಹಿಳೆ. ಆಕೆಯ ಆಪ್ತರು ಮಾಡಿದ ಕುತಂತ್ರದ ಫಲವಾಗಿ ಮೋಸ, ವಂಚನೆಯಿoದ ಬ್ರಿಟಿಷರ ದಾಳಿಗೆ ಚೆನ್ನಮ್ಮ ಬಲಿಯಾದರು ಎಂದು ವಿಷಾದಿಸಿದರು.
200ನೇ ಜಯಂತಿಯ ಈ ಸಂಧರ್ಭದಲ್ಲಿ ನಮ್ಮ ಕೊನೆಯ ಉಸಿರು ಇರುವ ತನಕ ಈ ದೇಶಕ್ಕೆ ಯಾರೆಲ್ಲ ಮಹನೀಯರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೋ ಅವರನ್ನ ನಾವು ಸ್ಮರಿಸಬೇಕು. ಪ್ರತಿ ಮನೆಯಲ್ಲೂ ರಾಣಿ ಚೆನ್ನಮ್ಮನಂತಹ ಮಹಿಳೆಯರು ಹುಟ್ಟಿಬರಬೇಕೆಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ. ಡಿ ಸುದರ್ಶನ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ. ಎಸ್ ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…