ಮೈಸೂರು

ಕೆಎಂಪಿಕೆ ಟ್ರಸ್ಟ್ ವತಿಯಿಂದ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂತಾಪ

ಮೈಸೂರು: ನಗರದ ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ರವರ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ಕಲಾವಿದರ ತವರೂರು, ಮೈಸೂರು ಮಹಾರಾಜರ ಕೊಡುಗೆಯಿಂದಾಗಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಳು ಶಾಶ್ವತವಾಗಿ ನೆಲೆಯೂರಿತು ಪಂಡಿತ್ ತಾರಾನಾಥ್ ರವರ ಸುಪುತ್ರ ಪಂಡಿತ್ ರಾಜೀವ್ ತಾರಾನಾಥ್ ರವರು ಮೈಸೂರಿನ ಸಂಗೀತ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ, ದೇಶ ವಿದೇಶದಲ್ಲೂ ಇಂದು ಅವರನ್ನು ಸ್ಮರಿಸುತ್ತಿರುವುದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಮೈಸೂರು ಜಿಲ್ಲಾಡಳಿತ ಮೈಸೂರು ದಸರಾ ಸಂದರ್ಭದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ರವರ ಸಂಗೀತ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಮತ್ತು ವಾದ್ಯ ಪರಿಕರಗಳ ಸಂಗೀತ ಪ್ರದರ್ಶನಗಳನ್ನು ಆಯೋಜಿಸಲಿ ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಪ್ರಸಾದ್ ಸ್ಕೂಲ್ ಆಫ್ ರಿದಮ್ ತಾಳವಾದ್ಯ ಪ್ರತಿಷ್ಠಾನದ ಸಂಸ್ಥಾಪಕ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ ಪ.ರಾಜೀವ್ ತಾರಾನಾಥ್ ರವರ ಮುಗ್ಧ ಸ್ವಭಾವ ಸಣ್ಣ ಮಕ್ಕಳಿಗೂ ಸಹ ಅರಿವಾಗುವ ರೀತಿಯಲ್ಲಿ, ಅವರು ಸಂಗೀತದ ಶಿಕ್ಷಣ ನೀಡುತ್ತಿದ್ದರು, ಹಿಂದುಸ್ಥಾನಿ ಅಲ್ಲದೆ ಕರ್ನಾಟಿಕ್ ಶಾಸ್ತ್ರೀಯ ಸಂಗೀತದ ಅರಿವು ಅವರಿಗಿತ್ತು ಎಂದು ಬಣ್ಣಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಡಾ ರಾಘವೇಂದ್ರ ಪ್ರಸಾದ್, ಹಿರಿಯ ತಬಲ ವಾದಕರಾದ ರಮೇಶ್ ದನ್ನೂರು, ಹಿಂದುಸ್ತಾನಿ ಗಾಯಕ ಪ್ರಭುರಾವ್, ಮಾಜಿನಗರ ಪಾಲಿಕೆ ಸದಸ್ಯ ಎಂ.ಡಿ ಪಾರ್ಥಸಾರಥಿ, ರವಿ, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೆಡಿಎಸ್ ನಗರ ಕಾರ್ಯದಕ್ಷ ಪ್ರಕಾಶ್ ಪ್ರಿಯದರ್ಶನ್, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ಕಲಾವಿದರ ಸಂಘದ ಕಾರ್ಯದರ್ಶಿ ಗುರುದತ್, ಸೂಚಿಂದ್ರ, ಮಿರ್ಲೆ ಪನೀಶ್, ಸಚಿನ್, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗಿಯಾಗಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

9 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

11 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

12 hours ago