ಮೈಸೂರು

ಕೆಎಂಪಿಕೆ ಟ್ರಸ್ಟ್ ವತಿಯಿಂದ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂತಾಪ

ಮೈಸೂರು: ನಗರದ ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ರವರ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ಕಲಾವಿದರ ತವರೂರು, ಮೈಸೂರು ಮಹಾರಾಜರ ಕೊಡುಗೆಯಿಂದಾಗಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಳು ಶಾಶ್ವತವಾಗಿ ನೆಲೆಯೂರಿತು ಪಂಡಿತ್ ತಾರಾನಾಥ್ ರವರ ಸುಪುತ್ರ ಪಂಡಿತ್ ರಾಜೀವ್ ತಾರಾನಾಥ್ ರವರು ಮೈಸೂರಿನ ಸಂಗೀತ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ, ದೇಶ ವಿದೇಶದಲ್ಲೂ ಇಂದು ಅವರನ್ನು ಸ್ಮರಿಸುತ್ತಿರುವುದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಮೈಸೂರು ಜಿಲ್ಲಾಡಳಿತ ಮೈಸೂರು ದಸರಾ ಸಂದರ್ಭದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ರವರ ಸಂಗೀತ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಮತ್ತು ವಾದ್ಯ ಪರಿಕರಗಳ ಸಂಗೀತ ಪ್ರದರ್ಶನಗಳನ್ನು ಆಯೋಜಿಸಲಿ ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಪ್ರಸಾದ್ ಸ್ಕೂಲ್ ಆಫ್ ರಿದಮ್ ತಾಳವಾದ್ಯ ಪ್ರತಿಷ್ಠಾನದ ಸಂಸ್ಥಾಪಕ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ ಪ.ರಾಜೀವ್ ತಾರಾನಾಥ್ ರವರ ಮುಗ್ಧ ಸ್ವಭಾವ ಸಣ್ಣ ಮಕ್ಕಳಿಗೂ ಸಹ ಅರಿವಾಗುವ ರೀತಿಯಲ್ಲಿ, ಅವರು ಸಂಗೀತದ ಶಿಕ್ಷಣ ನೀಡುತ್ತಿದ್ದರು, ಹಿಂದುಸ್ಥಾನಿ ಅಲ್ಲದೆ ಕರ್ನಾಟಿಕ್ ಶಾಸ್ತ್ರೀಯ ಸಂಗೀತದ ಅರಿವು ಅವರಿಗಿತ್ತು ಎಂದು ಬಣ್ಣಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಡಾ ರಾಘವೇಂದ್ರ ಪ್ರಸಾದ್, ಹಿರಿಯ ತಬಲ ವಾದಕರಾದ ರಮೇಶ್ ದನ್ನೂರು, ಹಿಂದುಸ್ತಾನಿ ಗಾಯಕ ಪ್ರಭುರಾವ್, ಮಾಜಿನಗರ ಪಾಲಿಕೆ ಸದಸ್ಯ ಎಂ.ಡಿ ಪಾರ್ಥಸಾರಥಿ, ರವಿ, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೆಡಿಎಸ್ ನಗರ ಕಾರ್ಯದಕ್ಷ ಪ್ರಕಾಶ್ ಪ್ರಿಯದರ್ಶನ್, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ಕಲಾವಿದರ ಸಂಘದ ಕಾರ್ಯದರ್ಶಿ ಗುರುದತ್, ಸೂಚಿಂದ್ರ, ಮಿರ್ಲೆ ಪನೀಶ್, ಸಚಿನ್, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗಿಯಾಗಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

1 hour ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago