ಮೈಸೂರು: ನಗರದ ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ರವರ ಸಂತಾಪ ಸೂಚಿಸಲಾಯಿತು.
ಬಳಿಕ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ಕಲಾವಿದರ ತವರೂರು, ಮೈಸೂರು ಮಹಾರಾಜರ ಕೊಡುಗೆಯಿಂದಾಗಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಳು ಶಾಶ್ವತವಾಗಿ ನೆಲೆಯೂರಿತು ಪಂಡಿತ್ ತಾರಾನಾಥ್ ರವರ ಸುಪುತ್ರ ಪಂಡಿತ್ ರಾಜೀವ್ ತಾರಾನಾಥ್ ರವರು ಮೈಸೂರಿನ ಸಂಗೀತ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ, ದೇಶ ವಿದೇಶದಲ್ಲೂ ಇಂದು ಅವರನ್ನು ಸ್ಮರಿಸುತ್ತಿರುವುದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಮೈಸೂರು ಜಿಲ್ಲಾಡಳಿತ ಮೈಸೂರು ದಸರಾ ಸಂದರ್ಭದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ರವರ ಸಂಗೀತ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಮತ್ತು ವಾದ್ಯ ಪರಿಕರಗಳ ಸಂಗೀತ ಪ್ರದರ್ಶನಗಳನ್ನು ಆಯೋಜಿಸಲಿ ಎಂದು ಮನವಿ ಮಾಡಿದರು.
ಬಳಿಕ ಮಾತನಾಡಿದ ಪ್ರಸಾದ್ ಸ್ಕೂಲ್ ಆಫ್ ರಿದಮ್ ತಾಳವಾದ್ಯ ಪ್ರತಿಷ್ಠಾನದ ಸಂಸ್ಥಾಪಕ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ ಪ.ರಾಜೀವ್ ತಾರಾನಾಥ್ ರವರ ಮುಗ್ಧ ಸ್ವಭಾವ ಸಣ್ಣ ಮಕ್ಕಳಿಗೂ ಸಹ ಅರಿವಾಗುವ ರೀತಿಯಲ್ಲಿ, ಅವರು ಸಂಗೀತದ ಶಿಕ್ಷಣ ನೀಡುತ್ತಿದ್ದರು, ಹಿಂದುಸ್ಥಾನಿ ಅಲ್ಲದೆ ಕರ್ನಾಟಿಕ್ ಶಾಸ್ತ್ರೀಯ ಸಂಗೀತದ ಅರಿವು ಅವರಿಗಿತ್ತು ಎಂದು ಬಣ್ಣಿಸಿದರು.
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಡಾ ರಾಘವೇಂದ್ರ ಪ್ರಸಾದ್, ಹಿರಿಯ ತಬಲ ವಾದಕರಾದ ರಮೇಶ್ ದನ್ನೂರು, ಹಿಂದುಸ್ತಾನಿ ಗಾಯಕ ಪ್ರಭುರಾವ್, ಮಾಜಿನಗರ ಪಾಲಿಕೆ ಸದಸ್ಯ ಎಂ.ಡಿ ಪಾರ್ಥಸಾರಥಿ, ರವಿ, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೆಡಿಎಸ್ ನಗರ ಕಾರ್ಯದಕ್ಷ ಪ್ರಕಾಶ್ ಪ್ರಿಯದರ್ಶನ್, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ಕಲಾವಿದರ ಸಂಘದ ಕಾರ್ಯದರ್ಶಿ ಗುರುದತ್, ಸೂಚಿಂದ್ರ, ಮಿರ್ಲೆ ಪನೀಶ್, ಸಚಿನ್, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗಿಯಾಗಿದ್ದರು
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…