ಮೈಸೂರು: ನಗರದ ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ರವರ ಸಂತಾಪ ಸೂಚಿಸಲಾಯಿತು.
ಬಳಿಕ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ಕಲಾವಿದರ ತವರೂರು, ಮೈಸೂರು ಮಹಾರಾಜರ ಕೊಡುಗೆಯಿಂದಾಗಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಳು ಶಾಶ್ವತವಾಗಿ ನೆಲೆಯೂರಿತು ಪಂಡಿತ್ ತಾರಾನಾಥ್ ರವರ ಸುಪುತ್ರ ಪಂಡಿತ್ ರಾಜೀವ್ ತಾರಾನಾಥ್ ರವರು ಮೈಸೂರಿನ ಸಂಗೀತ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ, ದೇಶ ವಿದೇಶದಲ್ಲೂ ಇಂದು ಅವರನ್ನು ಸ್ಮರಿಸುತ್ತಿರುವುದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಮೈಸೂರು ಜಿಲ್ಲಾಡಳಿತ ಮೈಸೂರು ದಸರಾ ಸಂದರ್ಭದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ರವರ ಸಂಗೀತ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಮತ್ತು ವಾದ್ಯ ಪರಿಕರಗಳ ಸಂಗೀತ ಪ್ರದರ್ಶನಗಳನ್ನು ಆಯೋಜಿಸಲಿ ಎಂದು ಮನವಿ ಮಾಡಿದರು.
ಬಳಿಕ ಮಾತನಾಡಿದ ಪ್ರಸಾದ್ ಸ್ಕೂಲ್ ಆಫ್ ರಿದಮ್ ತಾಳವಾದ್ಯ ಪ್ರತಿಷ್ಠಾನದ ಸಂಸ್ಥಾಪಕ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ ಪ.ರಾಜೀವ್ ತಾರಾನಾಥ್ ರವರ ಮುಗ್ಧ ಸ್ವಭಾವ ಸಣ್ಣ ಮಕ್ಕಳಿಗೂ ಸಹ ಅರಿವಾಗುವ ರೀತಿಯಲ್ಲಿ, ಅವರು ಸಂಗೀತದ ಶಿಕ್ಷಣ ನೀಡುತ್ತಿದ್ದರು, ಹಿಂದುಸ್ಥಾನಿ ಅಲ್ಲದೆ ಕರ್ನಾಟಿಕ್ ಶಾಸ್ತ್ರೀಯ ಸಂಗೀತದ ಅರಿವು ಅವರಿಗಿತ್ತು ಎಂದು ಬಣ್ಣಿಸಿದರು.
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಡಾ ರಾಘವೇಂದ್ರ ಪ್ರಸಾದ್, ಹಿರಿಯ ತಬಲ ವಾದಕರಾದ ರಮೇಶ್ ದನ್ನೂರು, ಹಿಂದುಸ್ತಾನಿ ಗಾಯಕ ಪ್ರಭುರಾವ್, ಮಾಜಿನಗರ ಪಾಲಿಕೆ ಸದಸ್ಯ ಎಂ.ಡಿ ಪಾರ್ಥಸಾರಥಿ, ರವಿ, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೆಡಿಎಸ್ ನಗರ ಕಾರ್ಯದಕ್ಷ ಪ್ರಕಾಶ್ ಪ್ರಿಯದರ್ಶನ್, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ಕಲಾವಿದರ ಸಂಘದ ಕಾರ್ಯದರ್ಶಿ ಗುರುದತ್, ಸೂಚಿಂದ್ರ, ಮಿರ್ಲೆ ಪನೀಶ್, ಸಚಿನ್, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗಿಯಾಗಿದ್ದರು
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…