ಮೈಸೂರು

ನಿಮ್ಮೊಳಗಿನ ಶಕ್ತಿ ಅರಿತು ಬೆಳೆಯಿರಿ: ಡಾ. ವಸಂತ ಕುಮಾರ್

ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್‌ ಕುಮಾರ್‌ ಉದ್ಘಾಟಿಸಿದರು.

ಬಳಿಕ ಮಾತನಾಡಿ, “ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, ಬೆಂಕಿ ಆಗಬಾರದು” ಎಂದರು. ಓದಿನ ಬಗ್ಗೆ ಆತಂಕ ಬಿಟ್ಟು, ಇಷ್ಟಪಟ್ಟು ಓದಿದರೆ ಉತ್ತಮ ಅಂಕಗಳು ಗಳಿಸಲು ಸಾಧ್ಯ ಮತ್ತು ನಿಮ್ಮ ಮೇಲೆ ನಿಮಗೆ ಭರವಸೆ ಹೆಚ್ಚಾಗುತ್ತದೆ ಎಂದರು ಕುವೆಂಪುರವರನ್ನು ಸ್ಮರಿಸುತ್ತಾ ಅವರ ‘ಓ ನನ್ನ ಚೇತನ’ ಗೀತೆಯನ್ನು ವಿದ್ಯಾರ್ಥಿನಿಯರ ಜೊತೆಗೆ ಹಾಡಿದರು.

ಕನ್ನಡ, ಆಂಗ್ಲ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮನ:ಶಾಸ್ತ್ರ, ಮತ್ತು ಭೂಗೋಳಶಾಸ್ತ್ರ ವಿಭಾಗಗಳ ಸಂಯೋಜಕರು ಅವರವರ ವಿಭಾಗ ಮತ್ತು ಪಠ್ಯದ ಪರಿಚಯವನ್ನು ಮಾಡಿಕೊಟ್ಟರು. ವಿಷಯಗಳ ಮಹತ್ವ ಮತ್ತು ಪ್ರಸ್ತುತತೆ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಆಡಳಿತ ಮತ್ತು ಕಛೇರಿ ವ್ಯವಸ್ಥೆ ಕುರಿತು ಕಛೇರಿ ವ್ಯವಸ್ಥಾಪಕರು ಮಾಹಿತಿ ನೀಡಿದರು. ವಿವಿಧ ಸಮಿತಿಗಳಾದ ಕ್ರೀಡೆ, ಸಾಂಸ್ಕೃತಿಕ ಸಮಿತಿ, ವಾರ್ಷಿಕ ಸಂಚಿಕೆ, ಗ್ರಂಥಾಲಯ, ಎನ್ಎಸ್ಎಸ್, ದೈಹಿಕ ಶಿಕ್ಷಣ, ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ, ಉದ್ಯೋಗ ಮಾಹಿತಿ ಸಮಿತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಹಾಗೂ ವಿದ್ಯಾರ್ಥಿ ನಿಲಯದ ಸೌಲಭ್ಯಗಳ ಬಗ್ಗೆ ವಿವರಗಳನ್ನು ಒದಗಿಸಲಾಯಿತು. ಸಮಿತಿಗಳ ಚಟುವಟಿಕೆ ಹಾಗೂ ಮಹತ್ವದ ಕುರಿತು ತಿಳಿಸಲಾಯಿತು.

ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಅಶ್ವಿನಿ, ಅಭಿವಿನ್ಯಾಸ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿಕೊಟ್ಟರು.

ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವ್ಯ, ಇತಿಹಾಸ ವಿಭಾಗದ ನಾಗಮಣಿ, ಕನ್ನಡ ಪ್ರಾಧ್ಯಾಪಕರಾದ ಡಾ. ನಂಜುಂಡಯ್ಯ ಭಾಗವಹಿಸಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago