ಮೈಸೂರು

ನಿಮ್ಮೊಳಗಿನ ಶಕ್ತಿ ಅರಿತು ಬೆಳೆಯಿರಿ: ಡಾ. ವಸಂತ ಕುಮಾರ್

ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್‌ ಕುಮಾರ್‌ ಉದ್ಘಾಟಿಸಿದರು.

ಬಳಿಕ ಮಾತನಾಡಿ, “ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, ಬೆಂಕಿ ಆಗಬಾರದು” ಎಂದರು. ಓದಿನ ಬಗ್ಗೆ ಆತಂಕ ಬಿಟ್ಟು, ಇಷ್ಟಪಟ್ಟು ಓದಿದರೆ ಉತ್ತಮ ಅಂಕಗಳು ಗಳಿಸಲು ಸಾಧ್ಯ ಮತ್ತು ನಿಮ್ಮ ಮೇಲೆ ನಿಮಗೆ ಭರವಸೆ ಹೆಚ್ಚಾಗುತ್ತದೆ ಎಂದರು ಕುವೆಂಪುರವರನ್ನು ಸ್ಮರಿಸುತ್ತಾ ಅವರ ‘ಓ ನನ್ನ ಚೇತನ’ ಗೀತೆಯನ್ನು ವಿದ್ಯಾರ್ಥಿನಿಯರ ಜೊತೆಗೆ ಹಾಡಿದರು.

ಕನ್ನಡ, ಆಂಗ್ಲ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮನ:ಶಾಸ್ತ್ರ, ಮತ್ತು ಭೂಗೋಳಶಾಸ್ತ್ರ ವಿಭಾಗಗಳ ಸಂಯೋಜಕರು ಅವರವರ ವಿಭಾಗ ಮತ್ತು ಪಠ್ಯದ ಪರಿಚಯವನ್ನು ಮಾಡಿಕೊಟ್ಟರು. ವಿಷಯಗಳ ಮಹತ್ವ ಮತ್ತು ಪ್ರಸ್ತುತತೆ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಆಡಳಿತ ಮತ್ತು ಕಛೇರಿ ವ್ಯವಸ್ಥೆ ಕುರಿತು ಕಛೇರಿ ವ್ಯವಸ್ಥಾಪಕರು ಮಾಹಿತಿ ನೀಡಿದರು. ವಿವಿಧ ಸಮಿತಿಗಳಾದ ಕ್ರೀಡೆ, ಸಾಂಸ್ಕೃತಿಕ ಸಮಿತಿ, ವಾರ್ಷಿಕ ಸಂಚಿಕೆ, ಗ್ರಂಥಾಲಯ, ಎನ್ಎಸ್ಎಸ್, ದೈಹಿಕ ಶಿಕ್ಷಣ, ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ, ಉದ್ಯೋಗ ಮಾಹಿತಿ ಸಮಿತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಹಾಗೂ ವಿದ್ಯಾರ್ಥಿ ನಿಲಯದ ಸೌಲಭ್ಯಗಳ ಬಗ್ಗೆ ವಿವರಗಳನ್ನು ಒದಗಿಸಲಾಯಿತು. ಸಮಿತಿಗಳ ಚಟುವಟಿಕೆ ಹಾಗೂ ಮಹತ್ವದ ಕುರಿತು ತಿಳಿಸಲಾಯಿತು.

ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಅಶ್ವಿನಿ, ಅಭಿವಿನ್ಯಾಸ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿಕೊಟ್ಟರು.

ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವ್ಯ, ಇತಿಹಾಸ ವಿಭಾಗದ ನಾಗಮಣಿ, ಕನ್ನಡ ಪ್ರಾಧ್ಯಾಪಕರಾದ ಡಾ. ನಂಜುಂಡಯ್ಯ ಭಾಗವಹಿಸಿದ್ದರು.

andolanait

Recent Posts

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

10 mins ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

16 mins ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

37 mins ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

54 mins ago

ಮುಂದಿನ ಮುಖ್ಯಮಂತ್ರಿ ದಲಿತ ನಾಯಕರೇ ಆಗಬೇಕು : ಹೈಕಮಾಂಡ್‌ಗೆ ಎಚ್‌ಸಿ ಮಹದೇವಪ್ಪ ಒತ್ತಾಯ

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.…

1 hour ago

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

2 hours ago