ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್ ಕುಮಾರ್ ಉದ್ಘಾಟಿಸಿದರು.
ಬಳಿಕ ಮಾತನಾಡಿ, “ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, ಬೆಂಕಿ ಆಗಬಾರದು” ಎಂದರು. ಓದಿನ ಬಗ್ಗೆ ಆತಂಕ ಬಿಟ್ಟು, ಇಷ್ಟಪಟ್ಟು ಓದಿದರೆ ಉತ್ತಮ ಅಂಕಗಳು ಗಳಿಸಲು ಸಾಧ್ಯ ಮತ್ತು ನಿಮ್ಮ ಮೇಲೆ ನಿಮಗೆ ಭರವಸೆ ಹೆಚ್ಚಾಗುತ್ತದೆ ಎಂದರು ಕುವೆಂಪುರವರನ್ನು ಸ್ಮರಿಸುತ್ತಾ ಅವರ ‘ಓ ನನ್ನ ಚೇತನ’ ಗೀತೆಯನ್ನು ವಿದ್ಯಾರ್ಥಿನಿಯರ ಜೊತೆಗೆ ಹಾಡಿದರು.
ಕನ್ನಡ, ಆಂಗ್ಲ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮನ:ಶಾಸ್ತ್ರ, ಮತ್ತು ಭೂಗೋಳಶಾಸ್ತ್ರ ವಿಭಾಗಗಳ ಸಂಯೋಜಕರು ಅವರವರ ವಿಭಾಗ ಮತ್ತು ಪಠ್ಯದ ಪರಿಚಯವನ್ನು ಮಾಡಿಕೊಟ್ಟರು. ವಿಷಯಗಳ ಮಹತ್ವ ಮತ್ತು ಪ್ರಸ್ತುತತೆ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಆಡಳಿತ ಮತ್ತು ಕಛೇರಿ ವ್ಯವಸ್ಥೆ ಕುರಿತು ಕಛೇರಿ ವ್ಯವಸ್ಥಾಪಕರು ಮಾಹಿತಿ ನೀಡಿದರು. ವಿವಿಧ ಸಮಿತಿಗಳಾದ ಕ್ರೀಡೆ, ಸಾಂಸ್ಕೃತಿಕ ಸಮಿತಿ, ವಾರ್ಷಿಕ ಸಂಚಿಕೆ, ಗ್ರಂಥಾಲಯ, ಎನ್ಎಸ್ಎಸ್, ದೈಹಿಕ ಶಿಕ್ಷಣ, ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ, ಉದ್ಯೋಗ ಮಾಹಿತಿ ಸಮಿತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಹಾಗೂ ವಿದ್ಯಾರ್ಥಿ ನಿಲಯದ ಸೌಲಭ್ಯಗಳ ಬಗ್ಗೆ ವಿವರಗಳನ್ನು ಒದಗಿಸಲಾಯಿತು. ಸಮಿತಿಗಳ ಚಟುವಟಿಕೆ ಹಾಗೂ ಮಹತ್ವದ ಕುರಿತು ತಿಳಿಸಲಾಯಿತು.
ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಅಶ್ವಿನಿ, ಅಭಿವಿನ್ಯಾಸ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿಕೊಟ್ಟರು.
ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವ್ಯ, ಇತಿಹಾಸ ವಿಭಾಗದ ನಾಗಮಣಿ, ಕನ್ನಡ ಪ್ರಾಧ್ಯಾಪಕರಾದ ಡಾ. ನಂಜುಂಡಯ್ಯ ಭಾಗವಹಿಸಿದ್ದರು.
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…