ಮೈಸೂರು

ನಿಮ್ಮೊಳಗಿನ ಶಕ್ತಿ ಅರಿತು ಬೆಳೆಯಿರಿ: ಡಾ. ವಸಂತ ಕುಮಾರ್

ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್‌ ಕುಮಾರ್‌ ಉದ್ಘಾಟಿಸಿದರು.

ಬಳಿಕ ಮಾತನಾಡಿ, “ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, ಬೆಂಕಿ ಆಗಬಾರದು” ಎಂದರು. ಓದಿನ ಬಗ್ಗೆ ಆತಂಕ ಬಿಟ್ಟು, ಇಷ್ಟಪಟ್ಟು ಓದಿದರೆ ಉತ್ತಮ ಅಂಕಗಳು ಗಳಿಸಲು ಸಾಧ್ಯ ಮತ್ತು ನಿಮ್ಮ ಮೇಲೆ ನಿಮಗೆ ಭರವಸೆ ಹೆಚ್ಚಾಗುತ್ತದೆ ಎಂದರು ಕುವೆಂಪುರವರನ್ನು ಸ್ಮರಿಸುತ್ತಾ ಅವರ ‘ಓ ನನ್ನ ಚೇತನ’ ಗೀತೆಯನ್ನು ವಿದ್ಯಾರ್ಥಿನಿಯರ ಜೊತೆಗೆ ಹಾಡಿದರು.

ಕನ್ನಡ, ಆಂಗ್ಲ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮನ:ಶಾಸ್ತ್ರ, ಮತ್ತು ಭೂಗೋಳಶಾಸ್ತ್ರ ವಿಭಾಗಗಳ ಸಂಯೋಜಕರು ಅವರವರ ವಿಭಾಗ ಮತ್ತು ಪಠ್ಯದ ಪರಿಚಯವನ್ನು ಮಾಡಿಕೊಟ್ಟರು. ವಿಷಯಗಳ ಮಹತ್ವ ಮತ್ತು ಪ್ರಸ್ತುತತೆ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಆಡಳಿತ ಮತ್ತು ಕಛೇರಿ ವ್ಯವಸ್ಥೆ ಕುರಿತು ಕಛೇರಿ ವ್ಯವಸ್ಥಾಪಕರು ಮಾಹಿತಿ ನೀಡಿದರು. ವಿವಿಧ ಸಮಿತಿಗಳಾದ ಕ್ರೀಡೆ, ಸಾಂಸ್ಕೃತಿಕ ಸಮಿತಿ, ವಾರ್ಷಿಕ ಸಂಚಿಕೆ, ಗ್ರಂಥಾಲಯ, ಎನ್ಎಸ್ಎಸ್, ದೈಹಿಕ ಶಿಕ್ಷಣ, ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ, ಉದ್ಯೋಗ ಮಾಹಿತಿ ಸಮಿತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಹಾಗೂ ವಿದ್ಯಾರ್ಥಿ ನಿಲಯದ ಸೌಲಭ್ಯಗಳ ಬಗ್ಗೆ ವಿವರಗಳನ್ನು ಒದಗಿಸಲಾಯಿತು. ಸಮಿತಿಗಳ ಚಟುವಟಿಕೆ ಹಾಗೂ ಮಹತ್ವದ ಕುರಿತು ತಿಳಿಸಲಾಯಿತು.

ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಅಶ್ವಿನಿ, ಅಭಿವಿನ್ಯಾಸ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿಕೊಟ್ಟರು.

ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವ್ಯ, ಇತಿಹಾಸ ವಿಭಾಗದ ನಾಗಮಣಿ, ಕನ್ನಡ ಪ್ರಾಧ್ಯಾಪಕರಾದ ಡಾ. ನಂಜುಂಡಯ್ಯ ಭಾಗವಹಿಸಿದ್ದರು.

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

4 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

4 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

5 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

5 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

7 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

7 hours ago