ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್ ಕುಮಾರ್ ಉದ್ಘಾಟಿಸಿದರು.
ಬಳಿಕ ಮಾತನಾಡಿ, “ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, ಬೆಂಕಿ ಆಗಬಾರದು” ಎಂದರು. ಓದಿನ ಬಗ್ಗೆ ಆತಂಕ ಬಿಟ್ಟು, ಇಷ್ಟಪಟ್ಟು ಓದಿದರೆ ಉತ್ತಮ ಅಂಕಗಳು ಗಳಿಸಲು ಸಾಧ್ಯ ಮತ್ತು ನಿಮ್ಮ ಮೇಲೆ ನಿಮಗೆ ಭರವಸೆ ಹೆಚ್ಚಾಗುತ್ತದೆ ಎಂದರು ಕುವೆಂಪುರವರನ್ನು ಸ್ಮರಿಸುತ್ತಾ ಅವರ ‘ಓ ನನ್ನ ಚೇತನ’ ಗೀತೆಯನ್ನು ವಿದ್ಯಾರ್ಥಿನಿಯರ ಜೊತೆಗೆ ಹಾಡಿದರು.
ಕನ್ನಡ, ಆಂಗ್ಲ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಮನ:ಶಾಸ್ತ್ರ, ಮತ್ತು ಭೂಗೋಳಶಾಸ್ತ್ರ ವಿಭಾಗಗಳ ಸಂಯೋಜಕರು ಅವರವರ ವಿಭಾಗ ಮತ್ತು ಪಠ್ಯದ ಪರಿಚಯವನ್ನು ಮಾಡಿಕೊಟ್ಟರು. ವಿಷಯಗಳ ಮಹತ್ವ ಮತ್ತು ಪ್ರಸ್ತುತತೆ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ಆಡಳಿತ ಮತ್ತು ಕಛೇರಿ ವ್ಯವಸ್ಥೆ ಕುರಿತು ಕಛೇರಿ ವ್ಯವಸ್ಥಾಪಕರು ಮಾಹಿತಿ ನೀಡಿದರು. ವಿವಿಧ ಸಮಿತಿಗಳಾದ ಕ್ರೀಡೆ, ಸಾಂಸ್ಕೃತಿಕ ಸಮಿತಿ, ವಾರ್ಷಿಕ ಸಂಚಿಕೆ, ಗ್ರಂಥಾಲಯ, ಎನ್ಎಸ್ಎಸ್, ದೈಹಿಕ ಶಿಕ್ಷಣ, ಮಹಿಳಾ ದೌರ್ಜನ್ಯ ನಿವಾರಣಾ ಸಮಿತಿ, ಉದ್ಯೋಗ ಮಾಹಿತಿ ಸಮಿತಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಹಾಗೂ ವಿದ್ಯಾರ್ಥಿ ನಿಲಯದ ಸೌಲಭ್ಯಗಳ ಬಗ್ಗೆ ವಿವರಗಳನ್ನು ಒದಗಿಸಲಾಯಿತು. ಸಮಿತಿಗಳ ಚಟುವಟಿಕೆ ಹಾಗೂ ಮಹತ್ವದ ಕುರಿತು ತಿಳಿಸಲಾಯಿತು.
ಐ.ಕ್ಯೂ.ಎ.ಸಿ ಸಂಯೋಜಕರಾದ ಡಾ. ಅಶ್ವಿನಿ, ಅಭಿವಿನ್ಯಾಸ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿಕೊಟ್ಟರು.
ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ದಿವ್ಯ, ಇತಿಹಾಸ ವಿಭಾಗದ ನಾಗಮಣಿ, ಕನ್ನಡ ಪ್ರಾಧ್ಯಾಪಕರಾದ ಡಾ. ನಂಜುಂಡಯ್ಯ ಭಾಗವಹಿಸಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…