ಮೈಸೂರು : ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಂಜನಗೂಡಿನಲ್ಲಿ ಏರ್ಪಡಿಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರ ಸಿಕ್ಕಾಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ ರೀತಿ ಸರ್ಕಾರ ನಡೆಸಿದರೆ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ಸಾಧ್ಯ ಎಂದು ತಿಳಿಸಿದರು.
ಬುದ್ದಿವಂತಿಕೆ ಎಂಬುದು ಯಾರ ಅಪ್ಪನ ಮನೆ ಸ್ವತ್ತಲ್ಲ. ನಮಗೆ ಅವಕಾಶ ಸಿಕ್ಕಿದ್ದರೆ ಮುಂದೆ ಇರುತ್ತಿದ್ದವು, ಅವಕಾಶ ಸಿಕ್ಕಿಲ್ಲ ಹೀಗಾಗಿ ಹಿಂದೆ ಬಿದ್ದಿದ್ದೇವೆ ಎಂದು ಅಭಿಪ್ರಯಾ ವ್ಯಕ್ತಪಡಿಸಿದರು.
ನಾನು ಓದಿ ವಕೀಲನಾಗಿದ್ದಕ್ಕೆ ಇದನ್ನೆಲ್ಲಾ ಸಂವಿಧಾನದ ಓದಿ ನಿಮಗೆ ಹೇಳಲು ಸಾಧ್ಯವಾಗಿದೆ. ಒಂದು ವೇಳೆ ನಾನು ಓದದೇ ಇದ್ದಿದ್ದರೇ ಇದನ್ನೆಲ್ಲ ನಿಮಗೆ ಹೇಳಲಾಗುತ್ತಿತ್ತೇ. ಅವಕಾಶ ಸಿಕ್ಕ ಕಾರಣ ವಕೀಲನಾದೆ, ರಾಜಕಾರಣಿಯಾದೆ ರಾಜ್ಯದ ಮುಖ್ಯಮಂತ್ರಿಯೂ ಆದೆ. ಒಂದು ವೇಳೆ ಅವಕಾಶ ಸಿಕ್ಕಿಲ್ಲದಿದ್ದರೇ ಇದೆಲ್ಲಾ ಆಗಲು ಸಾಧ್ಯವಾಗುತ್ತಿತ್ತ ಎಂದರು.
ಪ್ರತಿಯೊಬ್ಬರು ವಿದ್ಯಾವಂತರಾಗಾಬೇಕು, ಸ್ವಾಭಿಮಾನಿಗಳಾಗಬೇಕು ಹಾಗೂ ಮನುಷ್ಯರಾಗಿ ಎಲ್ಲರನ್ನೂ ಪ್ರೀತಿಸಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ ಎಂದು ಹೇಳಿದರು. ಅಂಬೇಡ್ಕರ್ ಹೇಗೆ ಹೇಳಿದ್ದಾರೆ ಹಾಗೆ ನಡೆದುಕೊಳ್ಳೋಣ ಎಂದು ಹೇಳಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…