ಮೈಸೂರು

ಕೋಟೆ | ತಾಯಿಯಿಂದ ಬೇರ್ಪಟ್ಟಿದ್ದ ಆನೆ ಮರಿ ಸಾವು

ಎಚ್.ಡಿ.ಕೋಟೆ : ಕೇರಳ ರಾಜ್ಯದಲ್ಲಿ ತಾಯಿ ಆನೆಯಿಂದ ಬೇರ್ಪಟ್ಟು, ಬಳ್ಳೆ ಆನೆ ಸಾಕಾಣಿಕಾ ಕೇಂದ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಆರೈಕೆಯಲ್ಲಿದ್ದ ಆನೆ ಮರಿ ಅನಾರೋಗ್ಯದಿಂದ ಅಸ್ವಸ್ಥಗೊಂಡು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಒಂದು ತಿಂಗಳಿಂದ ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಯು ಕೇರಳದ ಪುಲ್ವಳ್ಳಿ ಗ್ರಾಮದ ಶಾಲೆಯ ಬಳಿ ಕಾಣಿಸಿಕೊಂಡಿತ್ತು. ನಂತರ ಈ ಮರಿಯನ್ನು ರಕ್ಷಿಸಲಾಗಿತ್ತು. ತಾಯಿ ಆನೆಯ ಬಳಿ ಸೇರಿಸಲು ಕೇರಳ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿ ಕಬಿನಿ ನದಿಯ ಮತ್ತೊಂದು ದಡದಲ್ಲಿದ್ದ ನಾಗರಹೊಳೆ ಅರಣ್ಯದ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ ತಂದುಬಿಟ್ಟಿದ್ದರು.

ಇಲ್ಲಿನ ಅರಣ್ಯ ಅಧಿಕಾರಿಗಳಾದ ಮಧು ಮತ್ತು ಹನುಮಂತರಾಜು ಹಾಗೂ ಸಿಬ್ಬಂದಿ ಆನೆಮರಿಯನ್ನು ತಾಯಿ ಆನೆ ಪತ್ತೆ ಹಚ್ಚಿ ಅದರ ಜತೆ ಸೇರಿಸಲು ಕೇರಳದ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಿದ್ದರು. ಆದರೆ, ತಾಯಿ ಆನೆಯ ಸುಳಿವು ಸಿಗಲಿಲ್ಲವಾದ್ದರಿಂದ ಮರಿಯನ್ನು ಬಳ್ಳೆ ಶಿಬಿರದಲ್ಲಿ ಒಂದು ತಿಂಗಳಿನಿಂದ ಆರೈಕೆ ಮಾಡುತ್ತಿದ್ದರು. ಆದರೆ, ಅಸ್ವಸ್ಥಗೊಂಡಿದ್ದ ಆನೆ ಮರಿ ಅತಿಸಾರ ಭೇದಿಯಿಂದ ನಿತ್ರಾಣಗೊಂಡು ಚೇತರಿಕೆ ಕಾಣದೆ ಮೃತಪಟ್ಟಿದೆ.

ಪಶುವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿದರು. ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಡಿ. ಮಧು, ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿ ಹನುಮಂತರಾಜು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

4 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

4 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

4 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

5 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

5 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

5 hours ago