ಮೈಸೂರು

ಕೋಟೆ | ತಾಯಿಯಿಂದ ಬೇರ್ಪಟ್ಟಿದ್ದ ಆನೆ ಮರಿ ಸಾವು

ಎಚ್.ಡಿ.ಕೋಟೆ : ಕೇರಳ ರಾಜ್ಯದಲ್ಲಿ ತಾಯಿ ಆನೆಯಿಂದ ಬೇರ್ಪಟ್ಟು, ಬಳ್ಳೆ ಆನೆ ಸಾಕಾಣಿಕಾ ಕೇಂದ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಆರೈಕೆಯಲ್ಲಿದ್ದ ಆನೆ ಮರಿ ಅನಾರೋಗ್ಯದಿಂದ ಅಸ್ವಸ್ಥಗೊಂಡು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಒಂದು ತಿಂಗಳಿಂದ ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಯು ಕೇರಳದ ಪುಲ್ವಳ್ಳಿ ಗ್ರಾಮದ ಶಾಲೆಯ ಬಳಿ ಕಾಣಿಸಿಕೊಂಡಿತ್ತು. ನಂತರ ಈ ಮರಿಯನ್ನು ರಕ್ಷಿಸಲಾಗಿತ್ತು. ತಾಯಿ ಆನೆಯ ಬಳಿ ಸೇರಿಸಲು ಕೇರಳ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿ ಕಬಿನಿ ನದಿಯ ಮತ್ತೊಂದು ದಡದಲ್ಲಿದ್ದ ನಾಗರಹೊಳೆ ಅರಣ್ಯದ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ ತಂದುಬಿಟ್ಟಿದ್ದರು.

ಇಲ್ಲಿನ ಅರಣ್ಯ ಅಧಿಕಾರಿಗಳಾದ ಮಧು ಮತ್ತು ಹನುಮಂತರಾಜು ಹಾಗೂ ಸಿಬ್ಬಂದಿ ಆನೆಮರಿಯನ್ನು ತಾಯಿ ಆನೆ ಪತ್ತೆ ಹಚ್ಚಿ ಅದರ ಜತೆ ಸೇರಿಸಲು ಕೇರಳದ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಿದ್ದರು. ಆದರೆ, ತಾಯಿ ಆನೆಯ ಸುಳಿವು ಸಿಗಲಿಲ್ಲವಾದ್ದರಿಂದ ಮರಿಯನ್ನು ಬಳ್ಳೆ ಶಿಬಿರದಲ್ಲಿ ಒಂದು ತಿಂಗಳಿನಿಂದ ಆರೈಕೆ ಮಾಡುತ್ತಿದ್ದರು. ಆದರೆ, ಅಸ್ವಸ್ಥಗೊಂಡಿದ್ದ ಆನೆ ಮರಿ ಅತಿಸಾರ ಭೇದಿಯಿಂದ ನಿತ್ರಾಣಗೊಂಡು ಚೇತರಿಕೆ ಕಾಣದೆ ಮೃತಪಟ್ಟಿದೆ.

ಪಶುವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿದರು. ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಡಿ. ಮಧು, ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿ ಹನುಮಂತರಾಜು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

2 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

8 hours ago