ಮೈಸೂರು

ಕೋಟೆ | ತಾಯಿಯಿಂದ ಬೇರ್ಪಟ್ಟಿದ್ದ ಆನೆ ಮರಿ ಸಾವು

ಎಚ್.ಡಿ.ಕೋಟೆ : ಕೇರಳ ರಾಜ್ಯದಲ್ಲಿ ತಾಯಿ ಆನೆಯಿಂದ ಬೇರ್ಪಟ್ಟು, ಬಳ್ಳೆ ಆನೆ ಸಾಕಾಣಿಕಾ ಕೇಂದ್ರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಆರೈಕೆಯಲ್ಲಿದ್ದ ಆನೆ ಮರಿ ಅನಾರೋಗ್ಯದಿಂದ ಅಸ್ವಸ್ಥಗೊಂಡು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಒಂದು ತಿಂಗಳಿಂದ ತಾಯಿ ಆನೆಯಿಂದ ಬೇರ್ಪಟ್ಟ ಮರಿ ಆನೆಯು ಕೇರಳದ ಪುಲ್ವಳ್ಳಿ ಗ್ರಾಮದ ಶಾಲೆಯ ಬಳಿ ಕಾಣಿಸಿಕೊಂಡಿತ್ತು. ನಂತರ ಈ ಮರಿಯನ್ನು ರಕ್ಷಿಸಲಾಗಿತ್ತು. ತಾಯಿ ಆನೆಯ ಬಳಿ ಸೇರಿಸಲು ಕೇರಳ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲವಾಗಿ ಕಬಿನಿ ನದಿಯ ಮತ್ತೊಂದು ದಡದಲ್ಲಿದ್ದ ನಾಗರಹೊಳೆ ಅರಣ್ಯದ ಡಿ.ಬಿ.ಕುಪ್ಪೆ ವ್ಯಾಪ್ತಿಯಲ್ಲಿ ತಂದುಬಿಟ್ಟಿದ್ದರು.

ಇಲ್ಲಿನ ಅರಣ್ಯ ಅಧಿಕಾರಿಗಳಾದ ಮಧು ಮತ್ತು ಹನುಮಂತರಾಜು ಹಾಗೂ ಸಿಬ್ಬಂದಿ ಆನೆಮರಿಯನ್ನು ತಾಯಿ ಆನೆ ಪತ್ತೆ ಹಚ್ಚಿ ಅದರ ಜತೆ ಸೇರಿಸಲು ಕೇರಳದ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡು ಕೆಲಸ ನಿರ್ವಹಿಸಿದ್ದರು. ಆದರೆ, ತಾಯಿ ಆನೆಯ ಸುಳಿವು ಸಿಗಲಿಲ್ಲವಾದ್ದರಿಂದ ಮರಿಯನ್ನು ಬಳ್ಳೆ ಶಿಬಿರದಲ್ಲಿ ಒಂದು ತಿಂಗಳಿನಿಂದ ಆರೈಕೆ ಮಾಡುತ್ತಿದ್ದರು. ಆದರೆ, ಅಸ್ವಸ್ಥಗೊಂಡಿದ್ದ ಆನೆ ಮರಿ ಅತಿಸಾರ ಭೇದಿಯಿಂದ ನಿತ್ರಾಣಗೊಂಡು ಚೇತರಿಕೆ ಕಾಣದೆ ಮೃತಪಟ್ಟಿದೆ.

ಪಶುವೈದ್ಯಾಧಿಕಾರಿ ಡಾ.ಬಿ.ಬಿ.ಪ್ರಸನ್ನ ಮರಣೋತ್ತರ ಪರೀಕ್ಷೆ ನಡೆಸಿದರು. ಮೇಟಿಕುಪ್ಪೆ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಡಿ. ಮಧು, ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿ ಹನುಮಂತರಾಜು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

9 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

17 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

17 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

22 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

22 hours ago